Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಭರತ್ ಬೆಂಗಳೂರು ಬುಲ್ಸ್ ತಂಡವನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದ್ದಾರೆ.

- Advertisement -
- Advertisement -

ಪ್ರೊ ಕಬಡ್ಡಿ 9ನೇ ಆವೃತ್ತಿನ ಪಂದ್ಯಾವಳಿ ಆರಂಭಗೊಂಡು ಬಿರುಸಿನಿಂದ ಸಾಗುತ್ತಿದೆ. ಬೆಂಗಳೂರು ಬುಲ್ಸ್ ತಂಡವು ಸತತ ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲೊಂದಾಗಿದೆ. ಇದಕ್ಕೆ ಕಾರಣ ಪವನ್ ಕುಮಾರ್ ಶೆರಾವತ್ ಸ್ಥಾನ ತುಂಬುತ್ತಿರುವ ಯುವ ಆಲ್‌ ರೌಂಡರ್ ಆಟಗಾರ ಭರತ್ ನರೇಶ್ ಹೂಡಾ.

ಅಂದು ಅಕ್ಟೋಬರ್ 22. ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ನಡುವಿನ ಕಬಡ್ಡಿ ಪಂದ್ಯ ನಡೆಯುತ್ತಿತ್ತು. ಪಂದ್ಯದ ಆರಂಭದಲ್ಲಿಯೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಬೆಂಗಳೂರು ತಂಡವನ್ನು ಎರಡು ಬಾರಿ ಆಲೌಟ್ ಮಾಡಿ 16 ಅಂಕಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಪಂದ್ಯ ಏಕಮುಖವಾಗಿ ಮುಗಿಯುತ್ತದೆ ಯು ಮುಂಬಾ ಸುಲಭವಾಗಿ ಗೆಲ್ಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಏಕೆಂದರೆ ಬುಲ್ಸ್ ತಂಡದ ಡಿಫೆಂಡಿಂಗ್ ತೀರಾ ಕಳಪೆಯಾಗಿತ್ತು. ಆಗ ಬಂದ ನೋಡಿ ಆಪತ್ಭಾಂಧವ ಭರತ್.. ತನ್ನ ಮಿಂಚಿನ ರೈಡಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಸತತ ಪಾಯಿಂಟ್ ತಂದುಕೊಟ್ಟರು. ಪಂದ್ಯದ ಮೊದಲಾರ್ಧ ಮುಗಿದಾಗ ಬೆಂಗಳೂರು 13 ಪಾಯಿಂಟ್‌ಗಳ ಹಿನ್ನಡೆ ಅನುಭವಿಸಿತ್ತು.

ದ್ವಿತಿಯಾರ್ಧ ಆರಂಭವಾದ ಭರತ್ ಚುರುಕಿನ ರೈಡಿಂಗ್ ಮೂಲಕ ಯು ಮುಂಬಾ ತಂಡವನ್ನು ಮೂರು ಬಾರಿ ಆಲೌಟ್ ಮಾಡುವಲ್ಲಿ ಸಹಕಾರಿಯಾದರು. ತನ್ನ ಏಕಾಗ್ರತೆ ಮತ್ತು ಚಾಣಕ್ಷತನದಿಂದ 16 ರೈಡಿಂಗ್ ಪಾಯಿಂಟ್ ಗಳಿಸಿ ಬೆಂಗಳೂರು 10 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಅದೇ ರೀತಿ ದಬಾಂಗ್ ಡೆಲ್ಲಿ ನಡುವಿನ ಪಂದ್ಯದಲ್ಲಿಯೂ ಸಹ ಆಕ್ರಮಣಕಾರಿ ಆಟವಾಡಿದ ಭರತ್ ಕೈಚೆಲ್ಲಿ ಹೋಗಿದ್ದ ಪಂದ್ಯವನ್ನು ಕೊನೆಯ ಒಂದು ನಿಮಿಷದಲ್ಲಿ ತಹಬದಿಗೆ ತಂದು ಬೆಂಗಳೂರು ತಂಡ 4 ಪಾಯಿಂಟ್‌ಗಳ ಅಂತರದಿಂದ ಗೆಲುವು ಸಾಧಿಸಲು ನೆರವಾದರು. ಆ ಪಂದ್ಯದಲ್ಲಿ ಭರತ್ 20 ರೈಡ್‌ಗಳಿಂದ 20 ಪಾಯಿಂಟ್ ಗಳಿಸಿ ಮಿಂಚಿದರು.

ಬೆಂಗಳೂರು ಬುಲ್ಸ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ರೈಡರ್ ಭರತ್. 8ನೇ ಆವೃತ್ತಿಯಿಂದ ಬೆಂಗಳೂರು ತಂಡದ ಪರವಾಗಿ ಆಡುತ್ತಿರುವ ಅವರು ಆ ಆವೃತ್ತಿಯಲ್ಲಿ ಆಲ್ ರೌಂಡರ್ ಪ್ರದರ್ಶನ ನೀಡಿದ್ದರು. ಆದರೆ ಆಗ ಪವನ್ ಶೆರಾವತ್ ಕಾಲ ನಡೆಯುತ್ತಿತ್ತು. ಎಲ್ಲಾ ಪಂದ್ಯಗಳಲ್ಲಿಯೂ ಪವನ್ ಮಿಂಚುತ್ತಿದ್ದರು. ಹಾಗಾಗಿ ಭರತ್ ಸಹಾಯಕ ರೈಡರ್ ಮಾತ್ರ ಆಗಿದ್ದು ಅವರಿಗೆ ಅವಕಾಶದ ಕೊರತೆಯಿತ್ತು. 9ನೇ ಸೀಸನ್‌ನಲ್ಲಿ 20 ಲಕ್ಷ ರೂ ಗಳಿಗೆ ಬೆಂಗಳೂರು ಅವರನ್ನು ರಿಟೈನ್ ಮಾಡಿಕೊಂಡಿತು. ಈ ಬಾರಿ ವಿಕಾಸ್ ಖಂಡೋಲರನ್ನು ಮೇನ್ ರೈಡರ್ ಆಗಿ 1.7 ಕೋಟಿಗಳಿಗೆ ಬೆಂಗಳೂರು ತನ್ನದಾಗಿಸಿಕೊಂಡಿತು. ಆದರೆ ಇಡೀ ಸೀಸನ್‌ನಲ್ಲಿ ಮಿಂಚಿದ್ದು ಮಾತ್ರ ಭರತ್ ಹೂಡಾ.

ಭರತ್ ಆಡಿದ 15 ಪಂದ್ಯಗಳಲ್ಲಿ 177 ರೈಡ್ ಪಾಯಿಂಟ್ ಗಳಿಸಿ ಅತಿ ಹೆಚ್ಚು ರೈಡಿಂಗ್ ಪಾಯಿಂಟ್ ಗಳಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಹಾಗೆಯೇ 11 ಸೂಪರ್ ಟೆನ್ ಗಳಿಸಿದ್ದಾರೆ. ಈ ಎಲ್ಲವೂ ಗೆಲುವಿನ ಪಂದ್ಯಗಳಲ್ಲಿಯೇ ಬಂದಿರುವುದು ವಿಶೇಷ. ಅಲ್ಲದೆ ಅವರು 7 ಬಾರಿ ರೈಡಿಂಗ್‌ನಲ್ಲಿ ಮೂರಕ್ಕಿಂತ ಹೆಚ್ಚು ಜನರನ್ನು ಔಟ್ ಮಾಡಿ ಸೂಪರ್ ರೈಡ್ ಮಾಡಿದ್ದಾರೆ.

ಮೂಲತಃ ಹರ್ಯಾಣದವರಾದ ಭರತ್ ತಮಗಿರುವ ಎತ್ತರವನ್ನು ಸಂಪೂರ್ಣವಾಗಿ ಬಳಸಿಕೊಂಡು ಚಾಕಚಕ್ಯತೆಯಿಂದ ಪಾಯಿಂಟ್ ಗಳಿಸಿ ಮಿಂಚುತ್ತಿದ್ದಾರೆ. 8ನೇ ಸೀಸನ್‌ನಲ್ಲಿ ಪವನ್ ಕುಮಾರ್ ಶೆರಾವತ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....