Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...