Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...