Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...