Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...