Homeಕರ್ನಾಟಕಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

- Advertisement -
- Advertisement -

ಮಂಗಳೂರಿನ ಪಂಪ್‌ವೆಲ್‌ನ ಮಹಾವೀರ ಸರ್ಕಲ್‌‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಟೀಕೆಗೆ ಗುರಿಯಾಗಿದೆ.

“ಇದು ಕರಾವಳಿಗರಿಗೂ ಶಾಂತಿಯ ಪ್ರತೀಕ ಮಹಾವೀರರಿಗೂ ಮಾಡುವ ಅವಮಾನ ಅಲ್ಲವೇ? ಕರಾವಳಿಯನ್ನು ಲೂಟಿ ಮಾಡಿದವರ, ಕರಾವಳಿಯನ್ನು ಅಭಿವೃದ್ದಿಯಲ್ಲಿ ಹಿಂದೆ ತಳ್ಳಿದವರ ಪ್ರತಿಮೆಯನ್ನು ಕರಾವಳಿಯಲ್ಲಿ ಸ್ಥಾಪಿಸುವುದು ಸರಿಯೇ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಪತ್ರಕರ್ತ ನವೀನ್ ಸೂರಿಂಜೆ, “1665ರಲ್ಲಿ ಛತ್ರಪತಿ ಶಿವಾಜಿ ಬಸ್ರೂರಿನಲ್ಲಿ ದರೋಡೆ ನಡೆಸದೇ ಇದ್ದಲ್ಲಿ ಇವತ್ತು ಇಡೀ ಕರಾವಳಿ ಹೀಗಿರುತ್ತಿರಲಿಲ್ಲ. ಮುಂಬೈಯನ್ನೂ ಮೀರಿಸುವ ವಾಣಿಜ್ಯ ನಗರಿಯಾಗಿ ಇರುತ್ತಿತ್ತು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆಗ ಬಸ್ರೂರು ಕರಾವಳಿಯ ದೊಡ್ಡ ವಾಣಿಜ್ಯ ನಗರ. ಅಕ್ಕಿ, ಕಾಳುಮೆಣಸು ಸೇರಿದಂತೆ ಕರಾವಳಿ ಮಲೆನಾಡಿಗರು ಬೆಳೆಯುತ್ತಿದ್ದ ಮಸಾಲ ಪದಾರ್ಥಗಳನ್ನು ಬಸ್ರೂರಿನ ಮೂಲಕ ವಿದೇಶಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಬಸ್ರೂರು ಮಹಾಲಿಂಗೇಶ್ವರ ಜಾತ್ರೆ ಮಹಾಶಿವರಾತ್ರಿಯಂದೇ ನಡೆಯುತ್ತದೆ. ಆಗೆಲ್ಲಾ ಜಾತ್ರೆಯೆಂದರೆ ಧಾರ್ಮಿಕ ಕಾರ್ಯಕ್ರಮವಲ್ಲ. ಮಹಾಲಿಂಗೇಶ್ವರನ ತೇರು ಎಳೆಯುವ ಜಾತ್ರೆಯೆಂದರೆ ಕೃಷಿಕರ ಬದುಕಿನ ಮಹತ್ತರ ದಿನ. ಆ ದಿನ ಸಂತೆಯಲ್ಲಿ ಕೃಷಿಕರು ಬೆಳೆದಿದ್ದನ್ನು ನೇರವಾಗಿ ಮಾರಾಟ ಮಾಡುತ್ತಾರೆ. ಮೊದಲೇ ವಾಣಿಜ್ಯ ನಗರ ಬೇರೆ. ಅಂದು ರೈತರು ಮತ್ತು ವ್ಯಾಪಾರಿಗಳ ಬಳಿ ಹಣವಿರುತ್ತದೆ ಎಂದುಕೊಂಡು 1665 ರ ಫೆಬ್ರವರಿಯ ಮಹಾಶಿವರಾತ್ರಿ ದಿನ ಶಿವಾಜಿ ತನ್ನ ದರೋಡೆಕೋರ ಸೈನ್ಯದ ಜೊತೆ ದಾಳಿ ಮಾಡಿ ದೇವಸ್ಥಾನವನ್ನೂ ಸೇರಿದಂತೆ ಲೂಟಿ ಮಾಡಿದರು. ಬಸ್ರೂರಿನ ಮುಖ್ಯ ವ್ಯಾಪಾರಿ ವರ್ಗವಾಗಿದ್ದ ಜಿಎಸ್ ಬಿ (ಗೌಡ ಸಾರಸ್ವತ ಬ್ರಾಹ್ಮಣ)ರ ಮೇಲೆ ಶಿವಾಜಿ ದರೋಡೆ ಪಡೆ ಹಲ್ಲೆ ನಡೆಸಿತು. ಈ ದಾಳಿಯ ಬಳಿಕ ಬಸ್ರೂರು ವ್ಯಾಪಾರ ಕೇಂದ್ರ ನೆನೆಗುದಿಗೆ ಬಿದ್ದಿತ್ತು” ಎಂದು ತಿಳಿಸಿದ್ದಾರೆ.

“ಕರಾವಳಿಯ ಮೇಲೆ ಶಿವಾಜಿ ದರೋಡೆಗಾಗಿ ದಾಳಿ ಮಾಡಿದ ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾದ ಸತ್ಯ.‘ ಅದನ್ನು ಬಲಪಂಥೀಯರು ‘ಪೋರ್ಚುಗೀಸರ ವಾಣಿಜ್ಯ ಕೇಂದ್ರದ ಮೇಲೆ ನಡೆದ ದಾಳಿ’ ಎನ್ನುತ್ತಾರೆ. ಇದು ಸುಳ್ಳು. ಶಿವಾಜಿಯು ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ದಾಳಿ ಮಾಡುವಾಗ ಪೋರ್ಚುಗೀಸರ ಆಡಳಿತವಿರುವ ಗೋವಾವನ್ನು ಹಾದು ಬರುತ್ತಾರೆ. ಗೋವಾದಲ್ಲಿರುವ ಪೋರ್ಚುಗೀಸರ ಮೇಲೆ ಯಾವ ದಾಳಿಯನ್ನೂ ಮಾಡಲ್ಲ. ಆಗ ದಕ್ಷಿಣ ಕನ್ನಡದ ಬಸ್ರೂರಿನಲ್ಲಿ ಕೆಳದಿಯ ಭದ್ರಪ್ಪ ನಾಯಕ ಡಚ್ಚರೊಂದಿಗೆ ವಹಿವಾಟು ನಡೆಸುತ್ತಿದ್ದರು. ಪೋರ್ಚುಗೀಸರೂ ಕೂಡಾ ಕೆಳದಿಯವರ ಜೊತೆ ವ್ಯಾಪಾರ ವಹಿವಾಟಿಗೆ ಒಪ್ಪಂದ ಮಾಡಿದ್ದರೇ ವಿನಹ ಬಸ್ರೂರು‌ ಪೋರ್ಚುಗೀಸರ ಹಿಡಿತದಲ್ಲಿ ಇರಲಿಲ್ಲ. ಕನ್ನಡಿಗರೇ ಆದ ಕೆಳದಿಯವರ ಹಿಡಿತದಲ್ಲಿತ್ತು. ನಗ ನಾಣ್ಯಗಳ ದರೋಡೆಯ ಕಾರಣಕ್ಕಾಗಿಯೇ ಶಿವಾಜಿ ದಕ್ಷಿಣ ಕನ್ನಡ ಜಿಲ್ಲೆಗೆ ದಾಳಿ ನಡೆಸಿದರು” ಎಂದು ವಿವರಿಸಿದ್ದಾರೆ.

“ಪಂಪ್ ವೆಲ್ ಮಹಾವೀರ ಸರ್ಕಲ್ ನಲ್ಲಿ ಪ್ರತಿಮೆ ಸ್ಥಾಪಿಸುವುದಾದರೆ ಕೋಟಿ ಚೆನ್ನಯ್ಯರ ಪ್ರತಿಮೆ ಸ್ಥಾಪನೆ ಮಾಡಬೇಕು. ಅಲ್ಲೆ ಹತ್ತಿರದಲ್ಲಿ ಕಂಕನಾಡಿ ಗರೋಡಿಯೂ ಇದೆ. ಕರಾವಳಿಗರಿಗೊಂದು ಸ್ವಾಭಿಮಾನದ ಬದುಕು ಕಲಿಸಿದ ಕೋಟಿ ಚೆನ್ನಯ್ಯರು ಪ್ರತಿಮೆ ಸ್ಥಾಪಿಸಬೇಕೆ ಹೊರತು ಮಂಗಳೂರನ್ನು ದರೋಡೆ ಮಾಡಿದ್ದ ಶಿವಾಜಿಯದ್ದಲ್ಲ” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನವೀನ್‌ ಸೂರಿಂಜೆಯವರ ಬರಹವನ್ನು ಹತ್ತಾರು ಮಂದಿ ಹಂಚಿಕೊಂಡಿದ್ದಾರೆ. “ತುಳುನಾಡಿಗೆ ಮಾತ್ರವಲ್ಲ ಕನ್ನಡ ನಾಡಿಗೆ ಸಾಹಿತ್ಯ ಪರಂಪರೆಗೆ ಜೈನರ ಕೊಡುಗೆ ಮಹತ್ವದ್ದು. ಮಹಾವೀರರ ಹೆಸರು ಅಳಿಸುವುದು ಸರಿಯಲ್ಲ” ಎಂದು ಮಹಾಂತೇಶ್‌ ಕರಿಯಪ್ಪ ಎಂಬವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಲ್ಸನ್‌ ಕಿಣ್ಣಿಗೊಲಿ ಎಂಬವರು ಪ್ರತಿಕ್ರಿಯಿಸಿ, “ಇತ್ತೀಚಿಗೆ ಹೆಸರು ಬದಲಿಸುವ/ಪ್ರತಿಮೆ ಸ್ಥಾಪನೆ ನೆಪದಲ್ಲಿ ನಮ್ಮ ನೆಲದ ವಿರೋಧಿಗಳನ್ನೇ ಆರಿಸುವುದು ನೋಡಿದರೆ ಈ ಸರ್ಕಾರಕ್ಕೆ ಸ್ವಾಭಿಮಾನವೇ ಇಲ್ಲದಂತಾಗಿದೆ. ಇವರೊಂದಿಗೆ ನಮಗೂ ಸ್ವಾಭಿಮಾನ ಇಲ್ಲದಂತೆ ಮಾಡಿಬಿಟ್ಟಿದ್ದಾರಲ್ಲ” ಎಂದು ವಿವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...