Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...