Homeಕರ್ನಾಟಕಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

ಇದು ಶಿಕ್ಷಣ ಇಲಾಖೆಯೋ, ತುಘಲಕ್ ಮಾದರಿ ಆಡಳಿತವೋ?: ಡಾ.ವಿ.ಪಿ.ನಿರಂಜನಾರಾಧ್ಯ

- Advertisement -
- Advertisement -

“ಶಿಕ್ಷಣ ಇಲಾಖೆಯು ತನ್ನ ಗೊಂದಲದ ನಿರ್ಧಾರಗಳಿಂದ ಹೊರಬರುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಮಹಾಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಠ್ಯದಿಂದ ಹೊರಗಿಡಲಾಗಿದ್ದ ಪಾಠ, ಪದ್ಯಗಳನ್ನು ಮತ್ತೆ ಸೇರಿಸಲು ಸುತ್ತೋಲೆ ಹೊರಡಿಸಿರುವುದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮಕ್ಕಳ ಪ್ರವೇಶ ವಯಸ್ಸು, 5 ಹಾಗೂ 8ನೇ ತರಗಳಿಗೆ ಪಬ್ಲಿಕ್ ಪರೀಕ್ಷೆ, ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಂವಿಧಾನ ಬಾಹಿರವಾಗಿ ಪಾಲಕರಿಂದ ಶುಲ್ಕ, ಇತ್ಯಾದಿ ಮಕ್ಕಳ ಹಾಗೂ ಪಾಲಕ ವಿರೋಧಿ ತೀರ್ಮಾನಗಳಿಗೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಂಪಡೆಯಲಾಗಿತ್ತು. ಇದು ಮಕ್ಕಳು ಹಾಗೂ ಪಾಲಕರ ಮನಸ್ಸಿನಲ್ಲಿ ಇನ್ನು ಹಸಿಯಾಗಿರುವ ಬೆನ್ನಲ್ಲೇ ಮತ್ತೊಂದು ಹೊಸ ವಿವಾದಿತ ಸುತ್ತೋಲೆಯನ್ನು ಇಲಾಖೆ ಹೊರಡಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೊಸ ಸುತ್ತೋಲೆ ಅನ್ವಯ ಈ ಹಿಂದೆ ಮೌಲ್ಯಮಾಪನದಿಂದ ಕೈಬಿಟ್ಟಿದ್ದ ಪಾಠಗಳನ್ನು ಮತ್ತೆ ಸೇರಿಸುವ ಮೂಲಕ ಮಕ್ಕಳು ಪಾಲಕರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿಂದೆ 10ನೇ ತರಗತಿ ಮತ್ತು ಇತರ ಕೆಲವು ತರಗತಿಗಳ ಕನ್ನಡ ಪಠ್ಯಗಳ ಕೆಲವು ಪಾಠಗಳನ್ನು, ಲೇಖಕರು ಪಠ್ಯ ಪರಿಷ್ಕರಣಾ ವಿವಾದದ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಸ್ವಾಮ್ಯವನ್ನು ಹಿಂತೆಗೆದುಕೊಂಡಿದ್ದರು. ಆದ ಕಾರಣ ಪಠ್ಯದಿಂದ ಕೈಬಿಟ್ಟು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ
ಪರಿಗಣಿಸಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಆ ಪಾಠಗಳನ್ನು ಶಿಕ್ಷಕರು ಕಲಿಕೆ ಮತ್ತು ಮೌಲ್ಯಮಾಪನ ಪರಿಧಿಯಿಂದ ಹೊರಗಿಟ್ಟಿದ್ದರು. ಈಗ ಸರ್ಕಾರ ಮತ್ತೊಮ್ಮೆ ಸುತ್ತೋಲೆಯನ್ನು ಹೊರಡಿಸಿ ಈ ಹಿಂದೆ ಕೈ ಬಿಟ್ಟ ಪಾಠಗಳನ್ನು ಮತ್ತೆ 2022-23ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೇಳಿದೆ. ಈ ಪಾಠಗಳನ್ನು ಮತ್ತೆ ಬೋಧನೆ ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಹೊರಡಿಸಿರುವ ಈ ಸುತ್ತೋಲೆ ಮಕ್ಕಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಗೊಂದಲ ಉಂಟುಮಾಡಿದೆ. ಇದು ಶಿಕ್ಷಣ ಇಲಾಖೆಯೋ ಅಥವಾ ತುಘಲಕ್ ಮಾದರಿ ಆಡಳಿತವೋ ತಿಳಿಯುತ್ತಿಲ್ಲ” ಎಂದು ಟೀಕಿಸಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕನ್ನಡ ಕಲಿಯುವ ಮಕ್ಕಳಲ್ಲಿ ಕನ್ನಡದ ಪಾಠಗಳು ನಿರಾಸಕ್ತಿಯನ್ನು ಉಂಟು ಮಾಡಿದ್ದು, ‘ಹೆಚ್ಚು ಪಾಠಗಳಿರುವ ಭಾಷೆ ಕನ್ನಡ ಎಂತಲೂʼ, ಈ ಪಾಠಗಳನ್ನು ಶಿಕ್ಷಕರು ಒಂದು ಶೈಕ್ಷಣಿಕ ಅವಧಿಯಲ್ಲಿ ಕಲಿಸಲು ಅಸಾಧ್ಯವೆಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.

“ಅಲ್ಲದೆ 2021-22ನೇ ಸಾಇನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಆರು ವಿಷಯಗಳ ಪ್ರಗತಿ ನೋಡಿದಾಗ, ಪ್ರಥಮ ಭಾಷೆ ಕನ್ನಡದ ಫಲಿತಾಂಶ 4ನೇ ಸ್ಥಾನಕ್ಕೆ ಕುಸಿದಿದೆ. ಮಕ್ಕಳು ಮತ್ತು ಪೋಷಕರು ಪ್ರಥಮ ಭಾಷೆ ಕನ್ನಡ ಆಯ್ಕೆಯಿಂದ ವಿಮುಖರಾಗಿ ಭಾಷೆಗಳನ್ನು ಅಂಕಗಳಿಕೆ ದೃಷ್ಟಿಯಿಂದ ಇತರ ಭಾಷೆಗಳಾದ ಸಂಸ್ಕೃತ , ಇಂಗ್ಲಿಷ್, ಹಿಂದಿ ಆಯ್ಕೆ ಮಾಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

‘ಕನಿಷ್ಠ ಪಠ್ಯ ಗರಿಷ್ಠ ಕಲಿಕೆ’ ಎಂಬ ತತ್ವದ ಆಧಾರದಲ್ಲಿ ಮಕ್ಕಳಲ್ಲಿ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿರುವ ಈ ಸಂದರ್ಭದಲ್ಲಿ ಮತ್ತೆ ಕೈಬಿಟ್ಟ ಪಾಠಗಳನ್ನು ಕಲಿಯಿರಿ ಎಂದು ಹೊರಡಿಸಿರುವ ಈ ಸುತ್ತೋಲೆ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸಿದೆ. ಜೊತೆಗೆ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂಥಹ ತೀರ್ಮಾನ ಸ್ವಾಭಾವಿಕವಾಗಿ ಮಕ್ಕಳು ಹಾಗು ಪಾಲಕರಲ್ಲಿ ಆತಂಕ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ಮಕ್ಕಳ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಬಿಟ್ಟು ಈ ಕೂಡಲೇ ಹಿಂದಿನ ತೀರ್ಮಾನಕ್ಕೆ ಬದ್ಧವಾಗಿ ಮೌಲ್ಯಮಾಪನ/ಪರೀಕ್ಷೆ ಸರಳಗೊಳಿಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. ಈಗಾಗಲೇ ಪಠ್ಯದಿಂದ ಕೈಬಿಟ್ಟ ಪಠ್ಯಗಳನ್ನು ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬಾರದೆಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾನ್ಯಗೊಳಿಸಿ ಮಕ್ಕಳ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...