Homeಮುಖಪುಟಟಿ20 ವಿಶ್ವಕಪ್: ದಕ್ಷಿಣಾ ಆಫ್ರಿಕಾ ವಿರುದ್ಧ ಸೋತ ಭಾರತ- ಸೆಮಿಫೈನಲ್ ಹಾದಿ ತುಸು ಕಠಿಣ

ಟಿ20 ವಿಶ್ವಕಪ್: ದಕ್ಷಿಣಾ ಆಫ್ರಿಕಾ ವಿರುದ್ಧ ಸೋತ ಭಾರತ- ಸೆಮಿಫೈನಲ್ ಹಾದಿ ತುಸು ಕಠಿಣ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಮೊದಲನೇ ಸೋಲು ಕಂಡಿದೆ. ಇಂದು ದಕ್ಷಿಣಾ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸೋಲು ಅನುಭವಿಸಿತು. ಇದರಿಂದಾಗಿ ಎರಡನೇ ಗುಂಪಿನಲ್ಲಿ ಸೆಮಿಫೈನಲ್ ತಲುಪಲು ತೀವ್ರ ಪೈಪೋಟಿ ಏರ್ಪಟ್ಟಿದ್ದು ಭಾರತ ತಂಡವು ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರೋಹಿತ್ ಪಡೆ ದಕ್ಷಿಣ ಆಫ್ರಿಕಾ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ತತ್ತರಿಸಿತು. ಲುಂಗಿ ಎಂಗಿಡಿ ಮತ್ತು ಪಾರ್ನರ್ ದಾಳಿಗೆ ಸೂರ್ಯಕುಮಾರ್ ಯಾದವ್ ಹೊರುತು ಪಡಿಸಿ ಉಳಿದ ಬ್ಯಾಟ್ಸಮನ್ ಗಳ ಬಳಿ ಉತ್ತರವಿರಲಿಲ್ಲ. ಸೂರ್ಯ ಕುಮಾರ್ ಯಾದವ್ ರವರ ಪ್ರತಿರೋಧದ ಕಾರಣ (68 ರನ್ 40 ಎಸೆತಗಳಲ್ಲಿ) ಭಾರತ 9 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿತು.

ಇದನ್ನೂ ಓದಿ; ಗುಜರಾತ್‌ ತೂಗುಸೇತುವೆ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ; 177 ಜನರ ರಕ್ಷಣೆ

ಸುಲಭ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಆನಂತರ ಜೊತೆಗೂಡಿದ ಏಡನ್ ಮಾಕ್ರಂ ಮತ್ತು ಡೇವಿಡ್ ಮಿಲ್ಲರ್ ರವರ 76 ರನ್ ಗಳ ಜೊತೆಯಾಟ ತಂಡದ ಗೆಲುವಿಗೆ ಸಹಕಾರಿಯಾಯಿತು. ಮಾಕ್ರಂ ಮತ್ತು ಮಿಲ್ಲರ್ ಅರ್ಧಶತಕ ಗಳಿಸಿ ಗೆಲುವಿಗೆ ನೆರವಾದರು. ಕೊನೆಯ ಓವರ್ ನಲ್ಲಿ ಮಿಲ್ಲರ್ ಮಿಂಚಿದರು.

ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳಲ್ಲಿ 02 ಗೆಲುವು ಮತ್ತು ಒಂದು ಟೈನೊಂದಿಗೆ 05 ಅಂಕ ಗಳಿಸಿ ಎರಡನೇ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಅಲ್ಲದೆ ಸೆಮಿಫೈನಲ್ ನತ್ತ ಹೆಜ್ಜೆ ಇಟ್ಟಿದೆ. ಭಾರತ ತಂಡ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ಎರಡನೇ ಸ್ಥಾನದಲ್ಲಿದೆ.

ಭಾರತವು ಬಾಂಗ್ಲಾದೇಶ ಮುಂದಿನ ಪಂದ್ಯಗಳಲ್ಲಿ (ನವೆಂಬರ್ 2) ಮತ್ತು ಜಿಂಬಾಬ್ವೆ (ನವೆಂಬರ್ 6) ವಿರುದ್ದ ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಗೆದ್ದಲ್ಲಿ ಅದು 08 ಪಾಯಿಂಟ್‌ಗಳೊಂದಿಗೆ ನಿರಾಂತಕವಾಗಿ ಸೆಮಿಫೈನಲ್ ತಲುಪಲಿದೆ. ಆದರೆ ಒಂದು ಪಂದ್ಯ ಸೋತರೂ ಸೆಮಿಫೈನಲ್ ಕನಸು ಕಮರಿಹೋಗುವ ಆತಂಕವಿದೆ. ಏಕೆಂದರೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಜಿಂಬಾಬ್ವೆ ತಂಡಗಳು ಸಹ ಸೆಮಿಫೈನಲ್ ರೇಸ್ ನಲ್ಲಿವೆ. ಹಾಗಾಗಿ ಭಾರತ ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪಾಲಿನ ಆಪತ್ಬಾಂಧವ ಭರತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...