Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...