Homeಮುಖಪುಟ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ...

‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ ಆರೋಪ

- Advertisement -
- Advertisement -

ತೆಲಂಗಾಣದ ಮುನುಗೋಡೆ ಉಪಚುನಾವಣೆಗೆ ಮುಂಚಿತವಾಗಿ ಪಕ್ಷ ಬದಲಾಯಿಸಲು ಆಡಳಿತಾರೂಢ ಟಿಆರ್‌ಎಸ್ ಪಕ್ಷದ 20 ರಿಂದ 30 ಶಾಸಕರಿಗೆ ಭಾರಿ ಮೊತ್ತದ ಹಣವನ್ನು ಬಿಜೆಪಿ ಪಾವತಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ (ಕೆಸಿಆರ್‌‌) ಅವರು ಭಾನುವಾರ ಹೇಳಿದ್ದು,‘‘ಬಿಜೆಪಿಯ ‘ದಲ್ಲಾಳಿಗಳು’ ಹಾಲಿ ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌ ನೀಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ನೀವು ನಿನ್ನೆ ನೋಡಿದ್ದೀರಿ. ಇಲ್ಲಿ ಒಬ್ಬ ಕೆಸಿಆರ್ ಜೋರಾಗಿ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ರಾಜಕೀಯ ಅಂತ್ಯವನ್ನು ಮಾಡೋಣ ಎಂದು ಬಿಜೆಪಿ ಯೋಚಿಸುತ್ತಿದೆ. ಅವರು ಪ್ರತಿ ಶಾಸಕರನ್ನು 100 ಕೋಟಿ ರೂ.ಗೆ ಖರೀದಿಸಲು ದಲ್ಲಾಳಿಗಳನ್ನು ಕಳುಹಿಸಿದ್ದಾರೆ” ಎಂದು ಮುಖ್ಯಮಂತ್ರಿ ಕೆಸಿಆರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರು 20 ಅಥವಾ 30 ಶಾಸಕರನ್ನು ಖರೀದಿಸಲು ಬಯಸಿದ್ದರು. ಈ ಮೂಲಕ ಕೆಸಿಆರ್ ಸರ್ಕಾರವನ್ನು ಉರುಳಿಸಿ, ತೆಲಂಗಾಣವನ್ನು ಅತಿಕ್ರಮಿಸಿ ನಂತರ ತಮ್ಮ ಇಚ್ಛೆಯಂತೆ ಖಾಸಗೀಕರಣವನ್ನು ಜಾರಿಗೊಳಿಸಬಹುದು ಎಂದು ಬಯಸಿದ್ದರು” ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಟಿಆರ್‌ಎಸ್ ಶಾಸಕರಿಗೆ ಲಂಚ ನೀಡಿದ ಆರೋಪದಲ್ಲಿ ಬಿಜೆಪಿ ಏಜೆಂಟರೆಂದು ಹೇಳಲಾದ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಒಂದು ದಿನದ ನಂತರ ಮುಖ್ಯಮಂತ್ರಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಟಿಆರ್‌ಎಸ್ ಶಾಸಕರಲ್ಲೊಬ್ಬರಾದ ಪೈಲಟ್ ರೋಹಿತ್ ರೆಡ್ಡಿ ಅವರ ದೂರಿನ ಆಧಾರದ ಮೇಲೆ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಕ್ರಿಮಿನಲ್ ಪಿತೂರಿ, ಲಂಚ ನೀಡುವಿಕೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಉಪಬಂಧಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರೋಪಿಗಳು ತನಗೆ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ ಎಂದು ಶಾಸಕ ರೋಹಿತ್ ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿಯ ಹಣಕ್ಕೆ ಪ್ರತಿಯಾಗಿ ಶಾಸಕರು ಟಿಆರ್‌ಎಸ್ ತೊರೆದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಗಿತ್ತು.

ಇದನ್ನೂ ಓದಿ: ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ; ಮಂಗಳೂರು ದೋಚಿದವನ ಪ್ರತಿಮೆ ಬೇಡ ಎಂದ ಜನತೆ

“ಶಾಸಕರಿಗೆ ನೀಡಲಾಗಿದ್ದ 100 ಕೋಟಿ ರೂ.ಗಳನ್ನು ಒದಗಿಸಿದವರು ಯಾರು? ಈ ಬಗ್ಗೆ ತನಿಖೆ ನಡೆಯಬೇಕು. ಈ ಸಮಸ್ಯೆಯ ಹಿಂದೆ ಯಾರಿದ್ದಾರೆ? ಸಮಸ್ಯೆಯ ಸೃಷ್ಟಿಕರ್ತರು ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಅರ್ಹರೇ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಹಿರಿಯ ನಾಯಕ ಮತ್ತು ಒಕ್ಕೂಟ ಸರ್ಕಾರದ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ,“ಇಂದು ನೀವು ಅವರನ್ನು ದೆಹಲಿ ದಲ್ಲಾಳಿಗಳು ಎಂದು ಕರೆಯುತ್ತೀರಿ. ದಲ್ಲಾಳಿತನದ ಮೂಲಕವೇ ನೀವು ಈ ಮೊದಲು ನಿಮ್ಮ ಪಕ್ಷಕ್ಕೆ ಸೇರಿದ ಎಲ್ಲಾ ಶಾಸಕರನ್ನು ಪ್ರೋತ್ಸಾಹಿಸಿದ್ದೀರಿ” ಎಂದು ಟ್ವೀಟ್ ಮಾಡಿದ್ದಾರೆ.

“ನಾನು ಒಂದು ವಿಷಯ ತಿಳಿಸುತ್ತಿದ್ದೇನೆ ಕೆಸಿಆರ್ ಅವರೇ, ನಿಮ್ಮ ಸರ್ಕಾರವನ್ನು ಬೀಳಿಸುವ ಉದ್ದೇಶ ನಮಗಿಲ್ಲ. ಚುನಾವಣೆಯಲ್ಲಿ ನಿಮ್ಮದೇ ಅಜೆಂಡಾ ಆಗುವಂತೆ ನಿಮ್ಮದೇ ಸರ್ಕಾರವನ್ನು ಉರುಳಿಸಿ ಅನುಕಂಪ ಗಳಿಸುವ ಯೋಚನೆ ನಿಮ್ಮಲ್ಲಿರಬಹುದು. ನಮ್ಮ ಪಕ್ಷಕ್ಕೆ ಅಂತಹ ಉದ್ದೇಶವಿಲ್ಲ. ಈಗಾಗಲೇ ನೀವು ಜನರಲ್ಲಿ ನಿಮ್ಮ ಗೌರವವನ್ನು ಕಳೆದುಕೊಂಡಿದ್ದೀರಿ, ಜನರು ನಿಮ್ಮನ್ನು ಮತ್ತು ನಿಮ್ಮ ಪಕ್ಷವನ್ನು ಅಸಹ್ಯಪಡುತ್ತಿದ್ದಾರೆ” ಎಂದು ಕಿಶನ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ: ಒಂದೇ ತಿಂಗಳಲ್ಲಿ ಮೂರು ಪ್ರಕರಣ

ಈ ಮಧ್ಯೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಸಾಮಾನ್ಯ ಸಮ್ಮತಿಯನ್ನು ಹಿಂಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...