Homeಮುಖಪುಟಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

- Advertisement -
- Advertisement -

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ರಾಹುಲ್ ಗಾಂಧಿಯವರ ಈ ಸೂಕ್ಷ್ಮ ಹೇಳಿಕೆಗೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋ+-ಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೋರ್ಬಿ ಸೇತುವೆಯ ನವೀಕರಣದ ಹೊರತಾಗಿಯೂ ಅದು ಕುಸಿದಿದೆ. ಸಾವಿನ ಸಂಖ್ಯೆ 141 ಆಗಿದೆ. ಬಂಗಾಳ ಚುನಾವಣೆಯ ಹಿಂದಿನ ವಿಡಿಯೋ ಇದು. ಈಗ ಗುಜರಾತ್‌ನ ಚುನಾವಣೆ ಹತ್ತಿರವಾಗಿದೆ. ಇದು ವಂಚನೆಯ ಕೃತ್ಯವೇ? ದೇವರ ಕೆಲಸವೊ? ಎಂದು ಬಂಗಾಳದ ಖೇಲಾ ಹೊಬೆ ಟ್ವಿಟರ್‌ ಹ್ಯಾಂಡಲ್‌ನಿಂದ ಪ್ರಶ್ನಿಸಲಾಗಿದೆ.

ಖ್ಯಾತ ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್‌ರವರು ಸಹ “ಮೊರ್ಬಿ ಸೇತುವೆ ಕುಸಿದಿದೆ. ಇದು ದೇವರ ಕೆಲಸವೋ ಅಥವಾ ನಿಮ್ಮ ವಂಚನೆಯೋ ಮೋದಿಯವರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗುಜರಾತ್‌ ಸೇತುವೆ ದುರಂತ: ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...