Homeಕರ್ನಾಟಕಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಇದರ ವಿರುದ್ಧ ನಾವು ಧ್ವನಿ ಎತ್ತಬೇಕು. ಇಂತಹದ್ದಕ್ಕೆಲ್ಲಾ ಶರಣಾಗುತ್ತಾ ಹೋದರೆ ನಮ್ಮ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬೇಜವಾಬ್ದಾರಿ ಕೋಮುವಾದಿ, ಮೂಲಭೂತವಾದಿ ಶಕ್ತಿಗಳು, ‘ಅದು ಸರಿಯಿಲ್ಲ, ಇದು ಸರಿಯಿಲ್ಲ’ ಎಂದು ಹೇಳಿ, ಧಮ್ಕಿ ಹಾಕಿದ ಕೂಡಲೇ ಸರ್ಕಾರ ಅದಕ್ಕೆ ಬೆದರಿ ಕಾರ್ಯಕ್ರಮ ರದ್ದು ಮಾಡುವುದು ಅಂದರೆ ಏನರ್ಥ? ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕೆ ಅಥವಾ ಇಂತಹ ಶಕ್ತಿಗಳಿಗೆ ಶರಣಾಗಬೇಕೆ? ಇದು ದುರದೃಷ್ಟಕರ ಘಟನೆ. ಇಂತಹ ಸರ್ಕಾರಗಳು ಅಧಿಕಾರದಲ್ಲಿ ಮುಂದುವರೆಯುವುದಕ್ಕೆ ಲಾಯಕ್ಕಿದೆಯೆ? ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಥಮ ಪ್ರಕಾಶನ ಬೆಂಗಳೂರು ಪ್ರಕಟಿಸಿದ್ದ “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ಯೋಜಿಸಲಾಗಿತ್ತು. ಆದರೆ ಸಂಘಪರಿವಾರದಿಂದ ವಿರೋಧ ವ್ಯಕ್ತವಾದ್ದರಿಂದ ನಿಗದಿಪಡಿಸಲಾಗಿದ್ದ ಸ್ಥಳ ಬದಲಾಯಿಸಿ, ಲೇಖಕರ ಮನೆಯಲ್ಲಿಯೇ ಗುರುವಾರ ಸಂಜೆ ಬಿಡುಗಡೆಗೊಳಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತಗೆ ಮಾತನಾಡಿದ ಜಸ್ಟಿಸ್ ನಾಗಮೋಹನದಾಸ್, “ನಾವು ಯಾವುದೇ ಕಾರಣಕ್ಕೂ ಇಂತಹ ಬೆದರಿಕೆಗೆ ಶರಣಾಗಬಾರದು. ಕೆಲವೇ ಜನರಿದ್ದರೂ ಸರಿ, ಇದರ ವಿರುದ್ಧ ನಾವು ಧ್ವನಿ ಎತ್ತಬೇಕು. ಇಂತಹದ್ದಕ್ಕೆಲ್ಲಾ ಶರಣಾಗುತ್ತಾ ಹೋದರೆ ನಮ್ಮ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಳ್ಳುತ್ತೇವೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಳೆದುಕೊಂಡದರೆ ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುತ್ತೇವೆ. ಪ್ರಜಾಪ್ರಭುತ್ವ ಕಳೆದುಕೊಂಡರೆ ನಾವು ಸಂವಿಧಾನ ಕಳೆದುಕೊಳ್ಳುತ್ತೇವೆ. ಈ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡು ಗುಲಾಮರಂತೆ ಬದುಕಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಸಂಘಪರಿವಾರದ ವಿರೋಧದ ನಡುವೆಯು ‘ಇಮ್ರಾನ್ ಖಾನ್ ಒಂದು ಜೀವಂತ ದಂತಕತೆ’ ಪುಸ್ತಕ ಬಿಡುಗಡೆ

“ಇಮ್ರಾನ್ ಖಾನ್ ರಾಜಕೀಯ ನಿಲುವುಗಳ ಬಗ್ಗೆ ನನ್ನ ಗಟ್ಟಿ ವಿರೋಧವಿದೆ. ಅಷ್ಟಕ್ಕೆ ಅವರ ವಿರುದ್ಧ ದ್ವೇಷ ಅಸೂಯೆ, ಅಸಹನೆಯನ್ನು ಬೆಳೆಸಿಕೊಳ್ಳಬೇಕೆ? ಇದು ಎಲ್ಲಿಗೆ ಕೊನೆಯಾಗುತ್ತದೆ?” ಎಂದು ಅವರು ಪ್ರಶ್ನಿಸಿದರು.

“ಅಮೆರಿಕಾದವರು ಪಾಕಿಸ್ತಾನಕ್ಕೆ ಆಹಾರ ಸರಬರಾಜು ಮಾಡುತ್ತದೆ. ಅಲ್ಲಿನ ಮಾಜಿ ಅಧ್ಯಕ್ಷ ಒಬಾಮ ಪುಸ್ತಕ ಭಾರತದಲ್ಲಿ ರಾರಾಜಿಸುತ್ತದೆ. ಟ್ರಂಪ್ ಬಗ್ಗೆಗಿನ ಪುಸ್ತಕಗಳು ಓಡಾಡುತ್ತಿದೆ. ಅವರಿಗೆ ಭಾರತದಲ್ಲಿ ದೇವಸ್ಥಾನವನ್ನೇ ಕಟ್ಟಿದ್ದಾರೆ. ಇವೆಲ್ಲಾ ಏನು? ಸಂಘಪರಿವಾರದ ಈ ನಡೆ ಸಪೂರ್ಣವಾಗಿ ಸರಿಯಲ್ಲ” ಎಂದು ಜಸ್ಟಿಸ್ ನಾಗಮೋಹನ್ ದಾಸ್ ಅವರು ತಿಳಿಸಿದರು.

ಸಂಘಪರಿವಾದ ವಿರೋಧದ ಬಗ್ಗೆ ಮಾತನಾಡಿದ ಜಸ್ಟಿಸ್ ನಾಗಮೋಹನ್ ದಾಸ್ ಅವರು,“ಬಲಪಂಥೀಯರು ದೂರು ನೀಡಿದ್ದ ಹಿನ್ನಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಕಲಾಗ್ರಾಮಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ರದ್ದಾಗಿದೆ ಎಂದು ಬೋರ್ಡ್‌ ಹಾಕಿದ್ದರು. ಈ ನಂತರ ಆಯೋಜಕರು ಲೇಖಕರ ಮನೆಯ ಅಂಗಳಲ್ಲೇ ಪುಸ್ತಕ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಎಷ್ಟು ಬೆಂಕಿ ಹಚ್ಚಬಲ್ಲಿರಿ ನೀವು?

“ಯಾರೂ ಪುಸ್ತಕ ಓದದೇ, ಅದರಲ್ಲಿನ ವಿಚಾರಗಳನ್ನು ತಿಳಿದುಕೊಳ್ಳದೆ, ಇಮ್ರಾನ್ ಖಾನ್ ಒಬ್ಬ ಮುಸ್ಲಿಂ ಮತ್ತು ಪಾಕಿಸ್ತಾನಿ ಎಂಬ ಕಾರಣಕ್ಕೆ ವಿರೋಧ ಮಾಡುವಂತದ್ದು ಸರಿಯಲ್ಲ. ಇದು ಮೂರ್ಖರು ಮಾಡುವ ಕೆಲಸ. ಪುಸ್ತಕದಲ್ಲಿ ರಾಜಕೀಯದ ಬಗ್ಗೆ, ಧರ್ಮದ ಬಗ್ಗೆ ಯಾವುದೇ ವಿಚಾರವಿಲ್ಲ. ಇಮ್ರಾನ್ ಖಾನ್ ಅವರ ತಾಯಿಗೆ ಕ್ಯಾನ್ಸರ್‌ ಬಂದು ತೀರಿಹೋಗುತ್ತಾರೆ. ಅವರ ಊರಿನಲ್ಲಿ ಕ್ಯಾನ್ಸರ್‌ ಆಸ್ಪತ್ರೆ ಇಲ್ಲದಿದ್ದಕ್ಕೆ ಅವರು ಜಗತ್ತಿನ ಇರುವ ತನ್ನ ಎಲ್ಲಾ ಸ್ನೇಹಿತರಿಂದ ಹಣವನ್ನು ದೇಣಿಗೆ ಪಡೆದು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆ ಕಟ್ಟಲು ಭಾರತೀಯ ಕ್ರಿಕೆಟಿಗರು ಸಹಾಯ ಮಾಡಿದ್ದಾರೆ. ಚಿತ್ರ ನಟ ಅಮಿತಾಬ್ ಬಚ್ಚನ್ ಕೂಡಾ ಆ ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಕತೆಯನ್ನು ಪುಸ್ತಕ ಹೇಳಿದೆ” ಎಂದು ಅವರು ತಿಳಿಸಿದರು.

“ಇಮ್ರಾನ್ ಖಾನ್‌ ಅವರ ರಾಜಕೀಯ ವಿಚಾರಗಳು ಸೇರಿದಂತೆ ಅವರ ಹಲವಾರು ವಿಚಾರಗಳನ್ನು ನಾನು ಒಪ್ಪಲ್ಲ. ಅಷ್ಟಕ್ಕೆ ಅವರ ಮೇಲೆ ದ್ವೇಷ ಬೆಳೆಸಿಕೊಳ್ಳಬಹುದೆ? ನಮ್ಮ ದೇಶದಲ್ಲಿ ಧರ್ಮ, ಜಾತಿ, ಭಾಷೆ, ಆಹಾರ ಹೀಗೆ ಎಲ್ಲಾ ವಿಚಾರದಲ್ಲೂ ಅಸಹಿಷ್ಣುತೆ ಜಾಸ್ತಿಯಾಗುತ್ತಿದೆ. ಸಹಿಷ್ಣುತೆ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ. ಸುಪ್ರಿಂಕೋರ್ಟ್‌‌ ನ್ಯಾಯಮೂರ್ತಿಗಳಾದ ಒ.ಚಿನ್ನಪ್ಪ ರೆಡ್ಡಿ 1993ರ ಒಂದು ತೀರ್ಪಿನಲ್ಲಿ, ‘ನಮ್ಮ ಸಂಪ್ರದಾಯ, ನಮ್ಮ ತತ್ವಗಳು, ನಮ್ಮ ಸಂವಿಧಾನ ಸಹಿಷ್ಣುತೆಯನ್ನು ಭೋಧಿಸುತ್ತದೆ ಮತ್ತು ಪಾಲಿಸುತ್ತದೆ, ಅದನ್ನು ದುರ್ಬಲಗೊಳಿಸಬಾರದು’ ಎಂದು ಬರೆಯುತ್ತಾರೆ” ಎಂದು ಅವರು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

ಮಾಜಿ ಕ್ರಿಕೆಟಿಗ, ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಬಗ್ಗೆಗಿನ, “ಇಮ್ರಾನ್ ಖಾನ್-ಒಂದು ಜೀವಂತ ದಂತಕಥೆ” ಪುಸ್ತಕವನ್ನು ಗುರುವಾರ ಬೆಂಗಳೂರಿನ ನಾಗರಬಾವಿಯಲ್ಲಿ ಬಿಡುಗಡೆ ಮಾಡಲಾಯಿತು. ಪುಸ್ತಕದ ಲೇಖಕರಾದ ಸುಧಾಕರ್‌ ಎಸ್‌.ಬಿ. ಅವರ ನಿವಾಸದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌‌. ನಾಗಮೋಹನ ದಾಸ್‌ ಅವರು ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ‘ಭಗತ್‌ ಸಿಂಗ್ ಜೈಲ್ ಡೈರಿ’

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ, ಮಾಜಿ ಸಚಿವರಾದ ಡಾ.ಲೀಲಾದೇವಿ ಆರ್ ಪ್ರಸಾದ್, ಪುಸ್ತಕದ ಲೇಖಕ ಸುಧಾಕರ್ ಎಸ್ ಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ಪ್ರಕಾಶ್ ಟಿ.ಎನ್. ಕಮ್ಮರಡಿ, ಪ್ರೊ. ರಾಜಪ್ಪ ದಳವಾಯಿ, ವಿ.ಎನ್. ವೀರನಾಗಪ್ಪ ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂಘಿಗಳು ತೀವ್ರ ಮನೋವಿಕಾರಿಗಳು. ಇವರ ಅಪ್ಪಂದಿರು ಅಡ್ವಾಣಿ, ಮೋದಿಗಳೆಲ್ಲಾ ಪಾಕಿಸ್ತಾನಕ್ಕೆ ಹೋದವರೆ.ಮೋದಿ ಮಿತ್ರ ಆಜಿತ್ ಧೋವಲನ ಮಕ್ಕಳು ಸೌದಿಯಲ್ಲಿ ಪಾಕಿಸ್ತಾನಿಗಳ ಜೊತೆ ವ್ಯಾವಹಾರಿಕ ಪಾಲುದಾರರು ಎಂದು ಓದಿದ ನೆನಪು.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...