Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...