Homeಮುಖಪುಟಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

- Advertisement -
- Advertisement -

ಗುಜರಾತಿನ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣ ನಡೆಸಿದ ಖಾಸಗಿ ಸಂಸ್ಥೆಯು ಕೆಲವು ಹಳೆಯ ತಂತಿಗಳನ್ನೂ ತನ್ನ ಏಳು ತಿಂಗಳ ನವೀಕರಣದ ಸಮಯದಲ್ಲಿ ಬದಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

‘ಸೇತುವೆಯನ್ನು ನವೀಕರಿಸಿದ ಗುಜರಾತ್ ಮೂಲದ ಗಡಿಯಾರ ತಯಾರಿಕಾ ಒರೆವಾ ಸಂಸ್ಥೆಗೆ ಮಾರ್ಚ್‌ನಲ್ಲಿ ಮೋರ್ಬಿ ನಗರ ಪುರಸಭೆಯಿಂದ ಗುತ್ತಿಗೆ ನೀಡಲಾಯಿತು. ಆದರೆ ಯಾವುದೇ ಟೆಂಡರ್ ನೀಡುವ ಕ್ರಮ ಜರುಗಿಸಿರಲಿಲ್ಲ’ ಎಂದು ಒಪ್ಪಂದದ ಕಡತಗಳು ಹೇಳುತ್ತಿವೆ. ಸೇತುವೆಯಲ್ಲಿ ಕಟ್ಟಲಾಗಿದ್ದ ಕೆಲವು ಹಳೆಯ ತಂತಿಗಳನ್ನು ನವೀಕರಣದ ನಂತರವೂ ಉಳಿಸಿಕೊಳ್ಳಲಾಗಿದೆ ಎಂಬ ಸಂಗತಿ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಭಾರೀ ನೂಕುನುಗ್ಗಲಿನ ಭಾರದಿಂದ ಸೇತುವೆ ಕುಸಿದಿದೆ ಎಂದು ಗುಜರಾತಿನ ವಿಧಿವಿಜ್ಞಾನ ಪ್ರಯೋಗಾಲಯವು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ವಿಧಿವಿಜ್ಞಾನ ತಂಡವು ಕತ್ತರಿಸಿಬಿದ್ದ ಸೇತುವೆಯ ಲೋಹದ ತುಣುಕುಗಳನ್ನು ಪರೀಕ್ಷೆಗೆ ಒಳಪಡಿಸಿದೆ.

ಹೆಚ್ಚಾದ ಜನಸಂದಣಿಯು ಸೇತುವೆಯ ರಚನಾತ್ಮಕ ಸಮಗ್ರತೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ದುರಂತಕ್ಕೆ ಕಾರಣವಾಯಿತು ಎಂದು ವಿಧಿವಿಜ್ಞಾನ ತಂಡದ ಮೂಲಗಳು ಹೇಳಿವೆ.

ಲೋಹದ ತಂತಿಗಳು ಕತ್ತರಿಸಿ ನದಿಗೆ ಬೀಳುವ ಮೊದಲು ಜನರ ಗುಂಪು ಫೋಟೋಗಳನ್ನು ತೆಗೆದುಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಜೊತೆಗೆ ಸೇತುವೆಯು ತಿರುಗುತ್ತಿರುವುದು ಕಂಡುಬಂದಿದೆ.

“ಸೇತುವೆಯನ್ನು ಮತ್ತೆ ತೆರೆಯುವ ಬಗ್ಗೆ ಓರೆವಾ ಸಂಸ್ಥೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ. ಹಾಗೆ ಮಾಡಲು ಕಂಪನಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗಿಲ್ಲ” ಎಂದು ಪುರಸಭೆಯ ಮುಖ್ಯಾಧಿಕಾರಿ ಸಂದೀಪ್‌ಸಿಂಗ್ ಝಾಲಾ ಹೇಳಿದ್ದಾರೆ. ಈ ಆರೋಪಕ್ಕೆ ಓರೆವಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಡಿಯಾರ ತಯಾರಕ ಸಂಸ್ಥೆಯು “ನವೀಕರಣದ ತಾಂತ್ರಿಕ ಸಂಗತಿಗಳನ್ನು ಚಿಕ್ಕ ನಿರ್ಮಾಣ ಕಂಪನಿಯಾದ ದೇವಪ್ರಕಾಶ್ ಸೊಲ್ಯೂಷನ್ಸ್‌ಗೆ ಹೊರಗುತ್ತಿಗೆ ನೀಡಿದೆ” ಎಂದು ವರದಿಯಾಗಿದೆ.

ಕಳೆದ ವಾರ ಸೇತುವೆಯನ್ನು ಪುನಾರಾಂಭ ಮಾಡುವ ಸಂದರ್ಭದಲ್ಲಿ ಓರೆವಾ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಮಾತನಾಡುತ್ತಾ, “ಕಂಪನಿಯು ₹ 2 ಕೋಟಿ ವೆಚ್ಚದಲ್ಲಿ 100 ರಷ್ಟು ನವೀಕರಣವನ್ನು ನೆರವೇರಿಸಿದೆ” ಎಂದಿದ್ದರು.

ಇದನ್ನೂ ಓದಿರಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಒರೆವಾ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ರಿಪೇರಿ ಗುತ್ತಿಗೆದಾರರು ಮತ್ತು ಮೂವರು ಸೆಕ್ಯುರಿಟಿ ಗಾರ್ಡ್‌ಗಳು ಇದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವುದು ಅವರ ಕೆಲಸವಾಗಿತ್ತು.

ಮಚ್ಚು ನದಿಯಲ್ಲಿನ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನಾರಂಭಿಸಲಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ನೀರಿನಡಿಯ ಕೆಸರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೇತುವೆಯ ಎರಡೂ ತುದಿಗಳಿಗೆ ಸಮೀಪದಲ್ಲಿದ್ದ ಅನೇಕ ಜನರು ನೀರಿಲ್ಲದ ಜಾಗಕ್ಕೆ ಬಿದ್ದು ಸತ್ತಿದ್ದಾರೆ. ಅಂದರೆ ಸೇತುವೆ ಮುರಿದ ರಭಸಕ್ಕೆ ಗಟ್ಟಿಯಾದ ನೆಲದತ್ತ ಅನೇಕರು ಎಸೆಯಲ್ಪಟ್ಟಿದ್ದಾರೆ. ಸೇತುವೆಯ ಮಧ್ಯದಲ್ಲಿದ್ದವರು ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....