Homeಮುಖಪುಟ‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

- Advertisement -
- Advertisement -

ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಪೊಲೀಸರು ‘ದಿ ವೈರ್‌’ ಸುದ್ದಿಜಾಲತಾಣದ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ.ವೇಣು, ಸಿದ್ಧಾರ್ಥ್ ಭಾಟಿಯಾ, ಉಪಸಂಪಾದಕರಾದ ಜಾಹ್ನವಿ ಸೇನ್, ಉತ್ಪನ್ನ ಮತ್ತು ಉದ್ಯಮ ಮುಖ್ಯಸ್ಥ ಮಿಥುನ್ ಕಿಡಂಬಿ ಅವರ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿ ಮತ್ತು ಮುಂಬೈನಲ್ಲಿ ಮುತ್ತಿಗೆಹಾಕಲಾಗಿದೆ ಎಂದು ‘ದಿ ವೈರ್‌’ ತಿಳಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ನೀಡಿರುವ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಈ ಸಂಬಂಧ ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ವೈರ್ ಸಂಸ್ಥೆಯ ಐವರೂ ಪೊಲೀಸರಿಗೆ ಸಹಕರಿಸಿದ್ದಾರೆ. ಪೋಲಿಸರು ಕೇಳಿದ ಎಲ್ಲ ತಾಂತ್ರಿಕ ಸಾಧನಗಳನ್ನು ನೀಡಲಾಗಿದೆ. ವಶಪಡಿಸಿಕೊಂಡ ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಐಪ್ಯಾಡ್‌ಗಳನ್ನು ತಟಸ್ಥ ಸ್ಥಳದಲ್ಲಿ ಇರಿಸಲು ಬೇಡಿಕೆ ಇರಿಸಿದ್ದೇವೆ. ಡಿವೈಸ್‌ಗಳು ಮತ್ತು ಅವುಗಳಲ್ಲಿನ ಡೇಟಾದ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ವಹಿಸಿದ್ದೇವೆ ಎಂದು ‘ದಿ ವೈರ್‌’ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲ ಸಹಕಾರದ ಹೊರತಾಗಿಯೂ ದೆಹಲಿಯ ಭಗತ್ ಸಿಂಗ್ ಮಾರ್ಕೆಟ್‌ನಲ್ಲಿರುವ ‘ದಿ ವೈರ್‌’ನ ಕಚೇರಿಯನ್ನೂ ಶೋಧಿಸಲಾಗಿದೆ. ನಮ್ಮ ವಕೀಲರೊಬ್ಬರನ್ನು ಆ ಸ್ಥಳದಲ್ಲಿದ್ದ ಅಧಿಕಾರಿಗಳು ಹೊರಗೆ ತಳ್ಳಿದ್ದಾರೆ. ನಮ್ಮ ಅಕೌಂಟ್ ಸಿಬ್ಬಂದಿ ಬಳಸುವ ಎರಡು ಕಂಪ್ಯೂಟರ್‌ಗಳಿಂದ ಹಾರ್ಡ್ ಡಿಸ್ಕ್‌ಗಳನ್ನೂ ಕ್ರೈಂ ಬ್ರಾಂಚ್‌ನವರು ವಶಕ್ಕೆ ಪಡೆದಿದ್ದಾರೆ ಎಂದಿದೆ.

ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಂಚನೆ, ಫೋರ್ಜರಿ, ಮಾನನಷ್ಟ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಎರಡು ದಿನಗಳ ನಂತರ ಈ ದಾಳಿಗಳು ನಡೆದವು.

‍“ಪೊಲೀಸರು ಅಕ್ಟೋಬರ್‌ 31ರ ಸಂಜೆ 4.40ರ ಸುಮಾರಿಗೆ ಬಂದು 6 ಗಂಟೆಗೆ ವಾಪಾಸಾದರು” ಎಂದು ವೇಣು ಅವರು ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ. “ಅಮಿತ್ ಮಾಳವಿಯಾ ಸಲ್ಲಿಸಿದ ದೂರಿನ ಕಾರಣಕ್ಕಾಗಿ ದೆಹಲಿ ಪೊಲೀಸ್ ಅಪರಾಧ ವಿಭಾಗದ ಪರವಾಗಿ ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದರು. ಅವರು ನನ್ನ ಐಫೋನ್ ಮತ್ತು ಐಪ್ಯಾಡ್ ಅನ್ನು ವಶಕ್ಕೆ ಪಡೆದಿದ್ದಾರೆ” ಎಂದು ವಿವರಿಸಿದ್ದಾರೆ.

ನಾವು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದಿರುವ ವರದರಾಜನ್, “ಅವರು ಕೇಳಿದ ಡಿವೈಸ್‌ಗಳು ಮತ್ತು ಪಾಸ್‌ವರ್ಡ್‌ಗಳನ್ನು ನಾವು ನೀಡಿದ್ದೇವೆ. ಅವರು ನಾಲ್ಕು ಸಾಧನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಮ್ಯಾಕ್‌ಬುಕ್, ಎರಡು ಐಫೋನ್‌ಗಳು ಮತ್ತು ಒಂದು ಐಪ್ಯಾಡ್ ಅವರ ವಶಕ್ಕೆ ನೀಡಲಾಗಿದೆ” ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ.

ಡಿಜಿಟಲ್ ಸುದ್ದಿ ವೇದಿಕೆಗಳ ಸಂಸ್ಥೆ ಖಂಡನೆ

11 ಡಿಜಿಟಲ್ ನ್ಯೂಸ್‌ ಸಂಸ್ಥೆಗಳ ಸಂಘಟನೆಯಾದ ‘ಡಿಜಿಪಬ್‌ ನ್ಯೂಸ್‌ ಇಂಡಿಯಾ ಫೌಂಡೇಷನ್‌’ ದಾಳಿಯನ್ನು ಖಂಡಿಸಿದೆ. ಆಡಳಿತಾರೂಢ ಬಿಜೆಪಿಯ ವಕ್ತಾರರು ಸಲ್ಲಿಸಿದ ದೂರಿನ ಆಧಾರದ ಮೇಲೆ ತಕ್ಷಣದ ಮತ್ತು ಅನಿಯಂತ್ರಿತ ದಾಳಿ ನಡೆಸಿರುವುದು ದುರುದ್ದೇಶಪೂರಿತವಾಗಿದೆ ಎಂದಿದೆ.

ಭಾರತದಲ್ಲಿ ಪತ್ರಿಕೋದ್ಯಮದ ವಿರುದ್ಧ ಭೀತಿಯನ್ನು ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿದೆ ಎಂದು ಡಿಜಿಪಬ್ ಹೇಳಿಕೆಯಲ್ಲಿ ತಿಳಿಸಿದೆ.

“ಇದಲ್ಲದೆ ದಿ ವೈರ್ ಹೊಂದಿರುವ ಗೌಪ್ಯ, ಸೂಕ್ಷ್ಮ ಡೇಟಾವನ್ನು ವಶಪಡಿಸಿಕೊಳ್ಳುವ ಮತ್ತು ನಕಲು ಮಾಡುವ ಅಪಾಯವೂ ದಾಳಿಯಲ್ಲಿ ಇರುವುದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದೆ.

ವೈರ್‌ v/s ಮೆಟಾ ಮತ್ತು ಮಾಳವಿಯಾ

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ವಿವಾದ ಭುಗಿಲೆದ್ದಿತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ಇದನ್ನೂ ಓದಿರಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು. ಈ ವರದಿಯ ಬಳಿಕ ‘ದಿ ವೈರ್‌’ ಮತ್ತು ‘ಮೆಟಾ’ ನಡುವೆ ವಾಗ್ವಾದ ನಡೆದಿತ್ತು.

ಮತ್ತೊಂದು ವರದಿ ಬರೆದ ವೈರ್‌‌, “ವೈರ್‌ನ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್‌ ‌ಹಾಗೂ ಪತ್ರಕರ್ತೆ ಜಾಹ್ನವಿ ಸೇನ್‌ ಅವರ ಖಾತೆಗಳನ್ನು ಮೆಟಾ ಸಂಸ್ಥೆಯು ‘ವಾಚ್‌ಲಿಸ್ಟ್’ನಲ್ಲಿ ಇಟ್ಟಿದೆ” ಎಂದು ಆರೋಪಿಸಿತು. ವಾಗ್ವಾದ ನಡೆದು ಅಂತಿಮವಾಗಿ ‘ದಿ ವೈರ್‌’- ತನ್ನ ವರದಿಗಳನ್ನು ಮರುಪರಿಶೀಲಿಸುವುದಾಗಿ ತಿಳಿಸಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು. ಇದಾದ ಬಳಿಕ ಮಾಳವಿಯ ದೂರು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರಿ ಪೊಲೀಸ್ ಒಂದು ರಾಜಕೀಯ ಪಕ್ಷದ ವಕ್ತಾರ ದೂರು ನೀಡಿದಾಕ್ಷಣ ಪತ್ರಕಾ ಸಂಸ್ಥೆ ಮೇಲೆ ದಾಳಿ ಮಾಡತ್ತೆ ಅಂದರೆ ಪೊಲೀಸರು ಸಂವಿಧಾನದ ಪ್ರಕಾರ ಕೆಲಸಮಾಡುತ್ತಾ ಇದ್ದಾರೊ ಅಥವಾ ಆ ಪಕ್ಷದ ಗುಲಾಮಗಿರಿ ಮಾಡುತ್ತಾ ಇದ್ದಾರಾ ಅದು ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸವಲತ್ತು ಪಡೆದು? ಇವರೆಲ್ಲಾ ಸಗಣಿ ತಿನ್ನೋಕೆಯೇ ಲಾಯಕ್ಕೂ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...