Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...