Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...