Homeಕರ್ನಾಟಕರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ ಬಿಲ್ಲವ-ಈಡಿಗ ಸಮುದಾಯಕ್ಕೆ ‘ಕೋಶ’ದ ಬದಲು ‘ನಿಗಮ’ ಸ್ಥಾಪಿಸಲು ಒತ್ತಾಯ

- Advertisement -
- Advertisement -

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷ ಜನಸಂಖ್ಯೆ ಇರುವ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆ ಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆ ಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಈ ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆ ಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವ-ಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಸರ್ಕಾರ ಹೊಸದಾಗಿ ನೀಡಿರುವ ‘ಕೋಶ’ವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶ’ ಸ್ಥಾಪನೆ ಎಂಬುವುದು ಚುನಾವಣೆ ಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದ ಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

“ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದ ಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶ ಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆ” ಎಂದು ಅವರು ತಿಳಿಸಿದರು.

“ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಆ ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರ ಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನು ಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಈ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದು” ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

“ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆ ‘ಏನೋ’ ನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆ ಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದ ಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆ ಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ”

“ಈ ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿ ಕೋಶದಲ್ಲೂ ನಡೆಯುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

“ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆ ಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತು ಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದು” ಎಂದು ಪದ್ಮರಾಜ್ ಆರ್‌‌. ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...