Homeಮುಖಪುಟಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

- Advertisement -
- Advertisement -

ಗುರಾತಿನ ಮೋರ್ಬಿ ಸೇತುವೆ ಕುಸಿದು 141 ಜನರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ #Go_Back_Modi ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಇದನ್ನು ವಿರೋಧಿಸಿ ಪ್ರಧಾನಿ ಬೆಂಬಲಿಗರು #GujaratWithModiJi ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಬೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ರ್‍ಯಾಲಿ ನಡೆಸಲು ಯೋಜಿಸಿಕೊಂಡಿದ್ದರು. ಈ ವೇಳೆಗೆ ಸೇತುವೆ ಕುಸಿದು ಬಿದ್ದಿದ್ದು, ಇದರ ನಂತರ ತಮ್ಮ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

#Go_Back_Modi ಹ್ಯಾಶ್‌ಟ್ಯಾಗ್‌ನೊಂದಿಗಿನ ಹಲವಾರು ಟ್ವೀಟ್‌ಗಳು ಆಗಿದ್ದು ಪ್ರಧಾನಿಯನ್ನು ಟೀಕಿಸಿವೆ.

ಗುಜರಾತಿನ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಅವರು,“ಪ್ರಧಾನಿ ಭೇಟಿಗೂ ಮುನ್ನ ಮೊರ್ಬಿ ಸಿವಿಲ್ ಆಸ್ಪತ್ರೆಯ ಪೇಂಟಿಂಗ್ ಆರಂಭವಾಗಿದೆ! ಇದಕ್ಕೆ ಯಾರು ಆದೇಶಿಸಿದರೋ ಅವರಿಗೆ ನಾಚಿಕೆಯಾಗಬೇಕು. ಸ್ವಚ್ಛತೆ ಕಾಪಾಡಬೇಕು ಎಂದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ, ಇಷ್ಟು ಜರನು ಸಾವಿಗೀಡಾಗಿ ದೇಶ ಅಳುತ್ತಿರುವಾಗ ಬಣ್ಣ ಹಚ್ಚುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ರಾಜೇಶ್ ಎಂಬ ಟ್ವಿಟರ್‌ ಬಳಕೆದಾರದು,“27 ವರ್ಷಗಳ ಕಾಲ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿವೆ” ಎಂದು ಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಮೋದಿ ಭೇಟಿ ನೀಡಲಿರುವ ಆಸ್ಪತ್ರೆ ರಿಪೇರಿ ಮಾಡುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಂಡಿ ಅಶೋಕ್‌‌ ಅವರು,“ದಯವಿಟ್ಟು ಹಿಂತಿರುಗಿ ಹೋಗಿ ಮೋದಿ” ಎಂದು ಟ್ವೀಟ್ ಮಾಡಿದ್ದು, “ಗುಜರಾತ್ ಮೋಡೆಲ್” ಎಂದು ಬರೆದಿರುವ ಸೇತುವೆಯೊಂದು ಮುರಿದು ಬೀಳುವ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

ಮೋನು ವೆರ್ಮಾ ಅವರು, ಭಾರತಕ್ಕೆ ಪ್ರಧಾನಮಂತ್ರಿ ಬೇಕು ಹೊರತು ಜೋಕರ್‌ ಅಲ್ಲ ಎಂದು ಟ್ವೀಟ್‌ ಮಾಡಿದ್ದು, ಪ್ರಧಾನಿ ಮೋದಿ ಅವರ ಚಿತ್ರವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ಇದರ ನಡುವೆ #GujaratWithModiJi ಎಂಬ ಹ್ಯಾಶ್ ಟ್ಯಾಗ್‌ ಕೂಡಾ ಟ್ರೆಂಡ್ ಆಗಿದೆ.

“ಗುಜರಾತ್ ಹಿಂದೆ ನಮೋ ಜೊತೆಗಿತ್ತು…ಗುಜರಾತ್ ನಮೋ ಜೊತೆಗಿದೆ… ಗುಜರಾತ್ ಯಾವತ್ತಿಗೂ ನರೇಂದ್ರ ಮೋದಿ ಅವರ ಜೊತೆಗಿರುತ್ತದೆ” ಎಂದು ಟ್ವಿಟರ್‌‌ ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಆಡಳಿತಾರೂಢ ಬಿಜೆಪಿ ಗಾಯಾಳುಗಳ ಆರೈಕೆಗಿಂತ ಮೋದಿಯವರ ಭೇಟಿಗೆ ಆದ್ಯತೆ ನೀಡಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದ್ದು, CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ ಒರೆವಾ ಗ್ರೂಪ್‌ಗೆ 100 ವರ್ಷ ಹಳೆಯ ಸೇತುವೆಯ ನಿರ್ವಹಣೆಯ ಗುತ್ತಿಗೆಯನ್ನು ಮೋರ್ಬಿ ಪುರಸಭೆಯಿಂದ ನೀಡಿದೆ ಎಂದು ತಿಳಿದು ಬಂದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಮೋರ್ಬಿ ಪುರಸಭೆಯಿಂದ ಒರೆವಾ ಗ್ರೂಪ್‌ಗೆ ನಿರ್ವಹಣೆ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ನೀಡಲಾಗಿದೆ. ಈ ನಡುವೆ ಸೇತುವೆಯ ಫಿಟ್ನೆಸ್‌ನ ಪ್ರಮಾಣ ಪತ್ರ ನೀಡದೆ ಸೇತುವೆಯನ್ನು ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಮಧ್ಯೆ ಗುಜರಾತ್ ಪೊಲೀಸರು ಟಿಕೆಟ್‌ ಕೌಂಟರ್‌ನಲ್ಲಿದ್ದ ಇಬ್ಬರು ಗುಮಾಸ್ತರು ಸೇರಿದಂತೆ ಒರೆವಾ ಗ್ರೂಪಿನ ಒಂಬತ್ತು ಜನರನ್ನು ಬಂಧಿಸಿದೆ. ಒರೆವಾ ಗ್ರೂಪಿನ ಇಬ್ಬರು ಮ್ಯಾನೇಜರ್‌ಗಳು, ಇಬ್ಬರು ಗುತ್ತಿಗೆದಾರರು, ಮೂವರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಟಿಕೆಟ್ ಕೌಂಟರ್‌ನ ಗುಮಾಸ್ತರು ಈ ಬಂಧಿತರಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is shameful to arrest counter booking Clarks and security guards who are casual employees of the company. They are not responsible for bridge collapse. The board of directors like Managing Director or chairman should have been arrested if they are capable policemen.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...