Homeಕರ್ನಾಟಕಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

- Advertisement -
- Advertisement -

ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ.

ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು. ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು ತುಮಕೂರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಪಿಎಸ್‌ಐ ಹುದ್ದೆ ಆಕಾಂಕ್ಷಿ ಮೇಲೆ ಹಲ್ಲೆ ನಡೆದಿದೆ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, ಮತ್ತೊಂದೆಡೆ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿಯ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾಗ ಈ ಘಟನೆ ನಡೆದಿರುವುದಾಗಿ ಆಕಾಂಕ್ಷಿಗಳು ತಿಳಿಸಿದ್ದಾರೆ.

“ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ?” ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

“ಆರಗ ಜ್ಞಾನೇಂದ್ರ ಅವರೇ, ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ. ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಪಿಎಸ್‌ಐ ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರಗ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ” ಎಂದು ಆಗ್ರಹಿಸಿದೆ.

ನ್ಯಾಯಕ್ಕಾಗಿ ಆಗ್ರಹಿಸುತ್ತಾ ಆರಗ ಜ್ಞಾನೇಂದ್ರ ಅವರ ಕಾಲು ಹಿಡಿದು ಅಳುತ್ತಿರುವ ಅಭ್ಯರ್ಥಿಗಳ ವಿಡಿಯೊ ಜೊತೆಗೆ ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಪೊಲೀಸ್ ಕಾನ್‌ಸ್ಟೇಬಲ್‌ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಆರಗ ಅವರ ವರ್ತನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗೆ ದಿಲೀಪ್ ಲಮಾಣಿ ಎಂಬವರು ಪ್ರತಿಕ್ರಿಯಿಸಿ, “ಸುಮಾರು ದಿನಗಳಿಂದ ಪೋಲೀಸ್ ಕಾನ್‌ಸ್ಟೇಬಲ್‌ ವಯೋಮಿತಿ ಹೆಚ್ಚಳ ಸಲುವಾಗಿ ಮನವಿ ನೀಡುತ್ತಲೇ ಬಂದಿರುತ್ತೇವೆ ಆದರೂ ಈ ಸರ್ಕಾರ ಯುವಕರನ್ನ ಕಡೆಗಣಿಸುತ್ತಿದೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ನಾಯಕ ಬಾಬುರಾವ್‌ ಚಿಂಚನಸೂರ್ ಅವರ ವಿಡಿಯೊ ತುಣುಕನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ “ಇವತ್ತು ಖಾಲಿ ಪೇಪರ್ ಇದ್ದರೂ ಸಹ ಡಿವೈಎಸ್ಪಿ ಆಗಬಹುದು ಎಂದು ಚಿಂಚನಸೂರ್ ಹೇಳಿದ್ದಾರೆ. ಹಣದೊಂದಿಗೆ ಖಾಲಿ ಪೇಪರ್ ಇದ್ದರೆ ವ್ಯಾಪಾರಕ್ಕಿಟ್ಟಿರುವ ಸರ್ಕಾರಿ ಹುದ್ದೆಗಳು ಸಿಗುತ್ತವೆ ಎಂಬುದನ್ನು ಸೊಗಸಾಗಿ ಹೇಳಿದ್ದಾರೆ ಅಲ್ಲವೇ? ಬೊಮ್ಮಾಯಿಯವರೇ #40PercentSarkaraದ ಅಕ್ರಮ ನೇಮಕಾತಿಗಳು ಖಾಲಿ ಪೇಪರ್‌ನಲ್ಲಿಯೇ ನಡೆಯುತ್ತವೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....