Homeಮುಖಪುಟಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

- Advertisement -
- Advertisement -

ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಜನರನ್ನು ಉಳಿಸಿದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಜನರನ್ನು ಕಾಪಾಡಿದ ಹುಸೇನ್ ಮೆಹಬೂಬ್ ಪಠಾಣ್, ತೌಫೀಕ್, ಸದ್ದಾಂ ಮತ್ತು ನಯೀಮ್ ಅವರಿಗೆ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.

ಮುರಿದುಬಿದ್ದ ಸೇತುವೆಯಲ್ಲಿ ಸಾವು ಬದುಕಿನ ಜೊತೆ ಹೋರಾಡುತ್ತಿರುವ ಜನರನ್ನು ರಕ್ಷಿಸಲು ಹುಸೇನ್‌ಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂತು. ಪರಿಣಿತ ಈಜುಗಾರನಾಗಿದ್ದ ಹುಸೇನ್ ಸ್ಥಳಕ್ಕೆ ಧಾವಿಸಿ ತನ್ನ ಸುರಕ್ಷತೆಯ ಬಗ್ಗೆ ಚಿಂತಿಸದೆ ಸುಮಾರು 50 ಜನರನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲು ಸಹಾಯ ಮಾಡಿದನು ಎಂದು ‘ಇಂಡಿಯಾ ಟುಮಾರೋ’ ಸುದ್ದಿ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಸೇನ್ ಪಠಾಣ್ ಸುಮಾರು 50 ಜೀವಗಳನ್ನು ಉಳಿಸಿದ್ದಾರೆ. “ಸಂಜೆ 6 ಗಂಟೆ ಸುಮಾರಿಗೆ ನನಗೆ ಕರೆ ಬಂತು, ಸೇತುವೆ ಕುಸಿದಿದೆ. ಜನರು ಮುಳುಗುತ್ತಿದ್ದಾರೆ ಎಂಬ ಮಾಹಿತಿ ಬಂತು. ನಾನು ಪರಿಣಿತ ಈಜುಗಾರನಾಗಿದ್ದೇನೆ. ನೀರಿಗೆ ಹಾರಿ ಸಣ್ಣ ಮಕ್ಕಳು, ಗರ್ಭಿಣಿಯರು ಮತ್ತು ಇತರರು ಸೇರಿದಂತೆ ಸುಮಾರು 50 ಜನರನ್ನು ಉಳಿಸಿದೆ. ಸೇತುವೆಯ ಮೇಲೆ ಸುಮಾರು 700 ಜನರಿದ್ದರು ಎಂದು ನಾನು ಕೇಳಿದೆ. ಈ ಸೇತುವೆ ಬಳಿ ಹೋಗಿ ಸುಮಾರು ಏಳು ತಿಂಗಳಾಗಿತ್ತು. ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನ ಮಾಡಿದ್ದೇನೆ” ಎಂದು ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮತ್ತೋರ್ವ ಮುಸ್ಲಿಂ ಯುವಕ ಸದ್ದಾಂ, “ನನಗೆ ಈಜು ಗೊತ್ತಿಲ್ಲ, ಆದ್ದರಿಂದ ನಾನು ಯಾರನ್ನೂ ಮುಳುಗದಂತೆ ರಕ್ಷಿಸಲಿಲ್ಲ, ಆದರೆ ನಾನು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ನಾವು 15 ಮೀನುಗಾರರ ಪರಿಣಿತ ತಂಡವನ್ನು ಹೊಂದಿದ್ದೇವೆ. ಎಲ್ಲಾ ಉತ್ತಮ ಈಜುಗಾರರಾಗಿದ್ದಾರೆ. ಮೋರ್ಬಿಯಲ್ಲಿರುವ ಮಿಯಾನಾ ಸಮುದಾಯದವರು ನಾವು. ಅಂತಹ ಯಾವುದೇ ದುರಂತ ಸಂಭವಿಸಿದಾಗ ನಾವು ಜೀವಗಳನ್ನು ಉಳಿಸಲು ಧಾವಿಸುತ್ತೇವೆ. ಸೇತುವೆ ಕುಸಿದ ನಂತರ ನಮ್ಮ ಸಮುದಾಯವು, ಮಚ್ಚು ನದಿಯಲ್ಲಿ ಮುಳುಗುತ್ತಿದ್ದ ಸುಮಾರು 80 ಜನರನ್ನು ರಕ್ಷಿಸಿದೆ” ಎಂದು ಸಮುದಾಯದ ವಯಸ್ಸಾದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ತನ್ನ ಸ್ನೇಹಿತರ ಜೊತೆ ಸೇರಿ ಹಲವಾರು ಜೀವಗಳನ್ನು ಉಳಿಸಿದ ನಯೀಮ್ ಶೇಖ್, “ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುವ ಪ್ರಯತ್ನದಲ್ಲಿ ನನ್ನ ಸ್ನೇಹಿತರೊಬ್ಬರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ನಾನು ಮತ್ತು ನನ್ನ ಸ್ನೇಹಿತರು ಸೇರಿ 50 ರಿಂದ 60 ಜನರನ್ನು ಉಳಿಸಿದ್ದೇವೆ ಎಂದು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಅಪಘಾತದ ವೇಳೆ ಸೇತುವೆ ಮೇಲೆ 400-500 ಮಂದಿ ಇದ್ದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗೆ ಸಿಲುಕಿದ್ದರು. ಆದರೆ ಈ ಸಂತ್ರಸ್ತರಲ್ಲಿ ಹಲವಾರು ಜನರ ಪ್ರಾಣ ಉಳಿಸಿದ ಕೆಲವರು ಇದ್ದಾರೆ. ಅವರಲ್ಲಿ ಒಬ್ಬರು ನಯೀಮ್ ಶೇಖ್. ಇತರರ ಜೀವಗಳನ್ನು ಉಳಿಸಲು ತನ್ನ ಪ್ರಾಣವನ್ನೂ ಅಪಾಯಕ್ಕೆ ತಳ್ಳಿದ್ದರು.

ಇದನ್ನೂ ಓದಿರಿ: ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಮುಸ್ಲಿಂ ಯುವಕರ ಸಾಹಸಗಾಥೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. “ಇದು ದ್ವೇಷದ ವ್ಯಾಪಾರಿಗಳಿಗೆ ಸೂಕ್ತವಾದ ಪ್ರತ್ಯುತ್ತರ! ಮಾನವೀಯತೆಯು ಎಲ್ಲಾ ಧರ್ಮಗಳನ್ನು ಮೀರಿದೆ” ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

ದೇವ್ ದೇಸಾಯಿ ಎಂಬವರು ಟ್ವೀಟ್ ಮಾಡಿ, “ಇಬ್ಬರು ದೇವತೆಗಳು. ತೌಫೀಕ್ ಭಾಯಿ ಮತ್ತು ಹುಸೇನ್ ಪಠಾಣ್. ತೌಫೀಕ್ ಭಾಯ್ ಆಸ್ಪತ್ರೆಗೆ 35 ಜನರನ್ನು ಆಸ್ಪತ್ರೆಗೆ ಕರೆದೊಯ್ದರೆ, ಈಜುಗಾರ ಹುಸೇನ್ ಪಠಾಣ್ ಈಜುವ ಮೂಲಕ 50 ಜೀವಗಳನ್ನು ಉಳಿಸಿದರು” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...