Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...