Homeಕರ್ನಾಟಕಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

- Advertisement -
- Advertisement -

ಬೆಂಗಳೂರು: ದೊಡ್ಡಗಣಪತಿ ಮತ್ತು ಸಮೂಹ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ’ ಹೊರಡಿಸಿರುವ ‘ಟೆಂಡರ್‌ ಮತ್ತು ಹರಾಜು’ ಪ್ರಕಟಣೆ ಚರ್ಚೆಗೆ ಗ್ರಾಸವಾಗಿದೆ. ದಲಿತ ಹೋರಾಟಗಾರರ ವಿರೋಧದ ಬಳಿಕ ಟೆಂಡರ್‌‌ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಾಲಯ ದೇವಾಲಯ ಸಮೂಹಕ್ಕೆ ಸೇರಿದ ದೊಡ್ಡ ಗಣಪತಿ ದೇವಾಲಯ, ದೊಡ್ಡ ಬಸವಣ್ಣ ದೇವಾಲಯ, ಕಾರಂಜಿ ಆಂಜನೇಯಸ್ವಾಮಿ ದೇವಾಲಯಗಳಿಗೆ ಸಂಬಂಧಿಸಿದಂತೆ ಹರಾಜು ಪ್ರಕ್ರಿಯೆಯನ್ನು ನವೆಂಬರ್‌ 16ರಂದು ಹಮ್ಮಿಕೊಂಡಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾಬಿನ ವಿವರ ಟೀಕೆಗೆ ಗುರಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೊಡ್ಡಗಣಪತಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಪೂಜಾ ಕೈಂಕರ್ಯ ಅನುಕೂಲಕ್ಕಾಗಿ ಪೂಜಾ ಸಾಮಗ್ರಿ ಮಾರಾಟ ಮಾಡುವ ಸ್ಥಳದ ಹಕ್ಕಿನ ಟೆಂಟರ್‌ ಮತ್ತು ಹರಾಜು ಸಾಮಾನ್ಯ ವರ್ಗಕ್ಕೆ, ಈಡುಗಾಯಿ ಆಯ್ದುಕೊಳ್ಳುವ ಹಕ್ಕು ಸಾಮಾನ್ಯರಿಗೆ, ಎಳನೀರು ಮಾರಾಟ ಹಕ್ಕು ಸಾಮಾನ್ಯ ವರ್ಗಕ್ಕೆ ಮೀಸಲಾದರೆ ದೇವಸ್ಥಾನದ ಮುಂದೆ ಪಾದರಕ್ಷೆ ಕಾಯುವ ಹಕ್ಕನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿದೆ.

ದೊಡ್ಡಬಸವಣ್ಣ ದೇವಾಲಯದ ವಿಚಾರದಲ್ಲೂ ಇದೇ ಪ್ರಮಾದವಾಗಿದೆ. ಚಪ್ಪಲಿ ಕಾಯುವ ಕೆಲಸವನ್ನು ಪರಿಶಿಷ್ಟರಿಗೆ ಮೀಸಲಿರಿಸಿದ್ದರೆ, ದೇವಾಲಯದ ಖಾಲಿ ಜಾಗದಲ್ಲಿ ಮೆರಿಗೋ ರೌಂಡ್‌ ಮತ್ತು ಸುಂಕ ವಸೂಲಾತಿ ಹಕ್ಕನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು.

ನವೆಂಬರ್‌ 2ರಂದು ‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕಟಣೆ

ಧಾರ್ಮಿಕ ದತ್ತಿ ಇಲಾಖೆಯ ಈ ಪ್ರಕಟಣೆಯ ಕುರಿತು ಚಿಂತಕ, ಹೋರಾಟಗಾರ ಹ.ರಾ.ಮಹೇಶ್‌ ಅವರು ಬೇಸರ ವ್ಯಕ್ತಪಡಿಸಿದ್ದು, “ಈ ಕೆಟ್ಟ ರೋಗಗ್ರಸ್ತ ಮನಸ್ಥಿತಿಯ ವಿರುದ್ಧ ಕಾನೂನು ಹೋರಾಟಕ್ಕೆ ಸಿದ್ಧವಾಗೋಣ” ಎಂದು ಮನವಿ ಮಾಡಿದ್ದಾರೆ.

“ದೇವಾಲಯದ ಹೊರಗೆ ಸಾವಿರಾರು ರೂಪಾಯಿ ದುಡಿಯುವ ಪೂಜಾ ಸಾಮಗ್ರಿ ಮಾರಾಟ ಟೆಂಡರ್, ಈಡುಗಾಯಿ ಆಯುವ ಹಕ್ಕಿನ ಟೆಂಡರ್, ಎಳನೀರು ಮಾರಾಟ ಟೆಂಡರ್, ಸುಂಕ ವಸೂಲಾತಿ ಟೆಂಡರ್ ಇವೆಲ್ಲವೂ ಸಾಮಾನ್ಯ ವರ್ಗಗಳಿಗೆ ಮೀಸಲು. ದೇವಾಲಯದ ಬಾಗಿಲ ಬಳಿ ನೂರಾರು ರೂಪಾಯಿ ದುಡಿಯುವ ‘ಚಪ್ಪಲಿ‌ ಕಾಯುವ’ ಹಕ್ಕಿನ ಟೆಂಡರ್ ಎಸ್‌.ಸಿ., ಎಸ್‌.ಟಿ.ಗಳಿಗೆ ಮೀಸಲು‌‌. ದೇವಾಲಯದ ಗರ್ಭಗುಡಿಯೊಳಗೆ ತಣ್ಣಗೆ ಲಕ್ಷ ಲಕ್ಷ ರೂ. ದುಡಿಯುವ ಅರ್ಚಕ ಹುದ್ದೆ, ಹುಂಡಿಯ ಹಕ್ಕು ಕೇವಲ ಬ್ರಾಹ್ಮಣರಿಗೆ ಮಾತ್ರೆ” ಎಂದು ಆರೋಪಿಸಿದ್ದಾರೆ.

“Dignity of labour ಬಗ್ಗೆ ಪಾಠ ಮಾಡುವ, ಜಾತಿ ಇಲ್ಲ ಎಂದು ವಾದಿಸುವ, ಮೀಸಲಾತಿಯನ್ನು ವಿರೋಧಿಸುವ ಜನರೇ ಕಣ್ಣು ಬಿಟ್ಟು ಇಲ್ಲಿ ನೋಡಿ. ಚಪ್ಪಲಿ ಕಾಯುವ ಕೆಲಸವನ್ನು ಕೇವಲ ಎಸ್‌ಸಿ, ಎಸ್‌ಟಿಗಳಿಗೆ ಮೀಸಲಿಟ್ಟಿರುವ ಈ ಟೆಂಡರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಬಹಳ ಮುಕ್ತವಾಗಿ ಜಾತಿವಾದವನ್ನು ಪೋಷಿಸಿದೆ. ನೇರವಾಗಿ ಅಸ್ಪೃಶ್ಯತೆಯನ್ನು ಆಚರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

“ಇದಕ್ಕೆ ದೇವಾಲಯ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆಯು ಉತ್ತರಿಸಬೇಕಾಗುತ್ತದೆ. ಪ್ರಕಟಣೆ ನೀಡುವುದು, ವಿರೋಧ ಬಂದರೆ ನಂತರ ರದ್ದುಗೊಳಿಸುವುದು ನಡೆಯುತ್ತದೆ.‌ ಯಾರ ಗಮನಕ್ಕೂ ಬಾರದಿದ್ದರೆ ಜಾರಿಗೆ ತರುತ್ತಾರೆ. ಈ ನಾಟಕದ ಹುನ್ನಾರ ಯಾಕೆ? ನಾವು ಕಾನೂನಾತ್ಮಕ ಹೋರಾಟಕ್ಕೆ ಸಜ್ಜಾಗುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿರುವ ಕುರಿತು ಈ ‘ದಿನ.ಕಾಮ್‌’ ವರದಿ ಮಾಡಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ ಪ್ರತಿಕ್ರಿಯಿಸಿ, “ಯಾವುದೇ ಕೆಟ್ಟ ಉದ್ದೇಶದಿಂದ ನಾವು ಈ ರೀತಿ ಟೆಂಡರ್ ಕರೆದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನಾವು ಚಪ್ಪಲಿ ಕಾಯುವವರಾ ಎಂದು ಕೇಳುತ್ತಿದ್ದಾರೆ. ಹಾಗಾಗಿ, ಟೆಂಡರ್ ರದ್ದುಗೊಳಿಸಲಾಗಿದೆ. ಮೊದಲಿನಿಂದ ಈ ರೀತಿಯಿಂದಲೇ ಟೆಂಡರ್ ಪ್ರಕ್ರಿಯೆ ನಡೆದುಕೊಂಡು ಬರುತ್ತಿದೆ. ಸರ್ಕಾರದ ಆದೇಶದ ಪ್ರಕಾರ ನಾವು ಟೆಂಡರ್ ಕರೆದಿದ್ದೇವೆ” ಎಂದು ತಿಳಿಸಿದ್ದಾರೆ.

“ಆ ರೀತಿ ಟೆಂಡರ್ ಕರೆಯಬಾರದಿತ್ತು. ಆದರೆ, ತಪ್ಪಾಗಿ ಕರೆದಿದ್ದೇವೆ. ಹಾಗಾಗಿ ಕರೆದ ಟೆಂಡರ್ ಅನ್ನು ರದ್ದುಗೊಳಿಸಿ ನಾಳೆ ಮರು ಟೆಂಡರ್ ಕರೆಯಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...