Homeಕರ್ನಾಟಕಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

ಕೊಲ್ಲೂರು ಮೂಕಾಂಬಿಕೆ ‘ಸಲಾಂ ಮಂಗಳಾರತಿ’ ಹೆಸರು ಬದಲಾವಣೆಗೆ ಸರ್ಕಾರ ನಿರ್ಧಾರ!

- Advertisement -
- Advertisement -

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳ ಒತ್ತಡಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ‘ಸಲಾಂ ಮಂಗಳಾರತಿ ಪೂಜೆ’ಯ ಹೆಸರನ್ನು ಬದಲಾಯಿಸಲು ಒಪ್ಪಿಕೊಂಡಿದೆ. ಸುಮಾರು 250 ವರ್ಷಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಮಂಗಳಾರತಿ ಪೂಜೆಯನ್ನು ‘ದೀವಟಿಗೆ ಮಂಗಳಾರತಿ ಪೂಜೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ.

ಸ್ವಾತಂತ್ಯ್ರ ಹೋರಾಟಗಾರ ಟಿಪ್ಪುಸುಲ್ತಾನ್ 1763 ರಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನೆನಪಿಗಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಇರುವ ಮೂಕಾಂಬಿಕೆ ದೇವಸ್ಥಾನದಲ್ಲಿ ‘ಸಲಾಂ ಮಂಗಳಾರತಿ ಪೂಜೆ’ಯ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಇತಿಹಾಸ ತಜ್ಞ ಪ್ರೊ.ನಂಜೇರಾಜ ಅರಸ್, ಓಟ್‌ ಬ್ಯಾಂಕಿಗಾಗಿ ಧರ್ಮ ದ್ವೇಷವನ್ನು ಮುಂದಿಟ್ಟು ಆರತಿಯ ಹೆಸರನ್ನು ಬದಲಾಯಿಸಿದ ಕೂಡಲೇ ದೇವರು ಮೆಚ್ಚುತ್ತಾನೆಯೆ ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು,“ತನ್ನ ರಾಜ್ಯದ ಒಳಗಡೆಯಿದ್ದ ಎಲ್ಲಾ ದೇವಸ್ಥಾನಗಳಿಗೆ ಟಿಪ್ಪು ದತ್ತಿಗಳನ್ನು ನೀಡಿದ್ದ. ಅದರಲ್ಲೂ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಜಮೀನು, ಪೂಜಾ ಸಾಮಾಗ್ರಿಗಳ ಕೊಡುಗೆ ನೀಡಿದ್ದ. ಹೀಗಾಗಿ ತಮ್ಮ ದೇವಸ್ಥಾನಕ್ಕೆ ರಕ್ಷಣೆ ಮತ್ತು ದತ್ತಿಗಳನ್ನು ನೀಡಿದ ರಾಜನಿಗೆ ಧನ್ಯವಾದ ಸಮರ್ಪಿಸುವ ಸಲುವಾಗಿ ಅವುಗಳನ್ನು ಪ್ರಾರಂಭಿಸಲಾಗಿತ್ತು” ಎಂದು ಹೇಳಿದರು.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ಟಿಪ್ಪು ಸುಲ್ತಾನ್‌ ಅರ್ಜಿ ಹಾಕಿ ನನ್ನ ಹೆಸರಿನಲ್ಲಿ ಆರತಿ ಮಾಡಿ ಎಂದು ಒತ್ತಾಯ ಮಾಡಿಲ್ಲ. ಜನರಿಗೆ ಒಳ್ಳೆಯ ಮನಸ್ಸಿತ್ತು ಹಾಗಾಗಿ ಮುಸ್ಲಿಂ ರಾಜ ಎಂದು ನೋಡದೆ ತಮಗೆ ರಕ್ಷಣೆ ಒದಗಿಸಿದವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಇದನ್ನು ನಿಲ್ಲಿಸಿದ ಕೂಡಲೆ ಇತಿಹಾಸ ಅಳಿಸಿಹೋಗುವುದಿಲ್ಲ” ಎಂದು ಅವರು ಹೇಳಿದರು.

“ಈ ಸರ್ಕಾರಕ್ಕೆ ಕಡಿದು ಕಟ್ಟೆ ಹಾಕಿದ್ದೇವೆ ಎಂದು ಹೇಳಿಕೊಳ್ಳುವ ಯಾವುದೆ ಸಾಧನೆಯ ಕೆಲಸವನ್ನು ಮಾಡಿಲ್ಲ. ಇದು ಹಿಂದೂ ಓಟ್‌ಗಳನ್ನು ಕ್ರೂಡೀಕರಿಸಿ ಚುನಾವಣೆ ಗೆಲ್ಲುವ ತಂತ್ರ ಬಿಟ್ಟರೆ ಇನ್ನೇನಿಲ್ಲ. ಧರ್ಮ ದ್ವೇಷದ ಬೆಂಕಿ ಹಾಕಿಯೆ ಹಿಂದೂ ಓಟ್‌ಗಳನ್ನು ಪಡೆದುಕೊಳ್ಳಲು ಹೊರಟಿದ್ದಾರೆ” ಎಂದು ಪ್ರೊ. ನಂಜರಾಜೆ ಅರಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಬ್ಬಕ್ತರಿಗೆ ಗೊತ್ತಿಲ್ಲ ಅನ್ಸುತ್ತೆ ಈ ದೇಶಕ್ಕೆ ಮುಸ್ಲಿಂರು ಬರದಿದ್ರೆ, ಮುಸ್ಲಿಂರ ಕೊಡುಗೆಗಳು ಇಲ್ದಿದ್ರೆ ಈ ದೇಶ ಎಷ್ಟು ಹಿಂದುಳಿದ ದೇಶ ಆಗಿರ್ತಿತ್ತು ಅಂತ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...