Homeಮುಖಪುಟಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

- Advertisement -
- Advertisement -

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ.

ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮತ್ತೆ ಆರಂಭಿಕ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆ.ಎಲ್ ರಾಹುಲ್ ಜವಾಬ್ದಾರಿಯುತ ಆಟವಾಡಿದರು. 32 ಎಸೆತಗಳಲ್ಲಿ 50 ರನ್ ಗಳಿಸಿದರು. ವಿರಾಟ್ ಕೊಹ್ಲಿ ಮತ್ತೊಮ್ಮೆ ಆಕರ್ಷಕ ಪ್ರದರ್ಶನ ನೀಡಿ 44 ಎಸೆತಗಳಲ್ಲಿ 64 ರನ್ ಗಳಿಸಿ ಭಾರತ ತಂಡ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿದ ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ ಕೇವಲ 5 ರನ್ ಗಳಿಸಿ ಔಟಾದರೆ ದಿನೇಶ್ ಕಾರ್ತಿಕ್ ಸಹ 07 ರನ್ ಗಳಿಸಿದ್ದಾಗ ರನ್ ಔಟ್ ಆದರು.

ಆಲ್ ರೌಂಡರ್ ಅಕ್ಸರ್ ಪಟೇಲ್ ರನ್ ಗಳಿಸಲು ತಿಣುಕಾಡಿದರು. ಆರ್. ಅಶ್ವಿನ್ ಕೊನೆಯಲ್ಲಿ 6 ಎಸೆತಗಳಲ್ಲಿ 13 ರನ್ ಗಳಿಸಿ ತಂಡಕ್ಕೆ ನೆರವಾದರು. ಭಾರತ ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು.

ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿತು.

ಛಲಬಿಡೆದೆ ಆಡಿದ ಬಾಂಗ್ಲಾದ ಸೋಹಾನ್ ಬೌಂಡರಿ ಮೇಲೆ ಬೌಂಡರಿ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಕೊನೆಯ ಓವರ್‌ನಲ್ಲಿ ಗೆಲುವಿಗೆ 21 ರನ್ ಗಳಿಸಬೇಕಿತ್ತು. ಆದರೆ ಸಾಧ್ಯವಾಗಲಿಲ್ಲ.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...