Homeಮುಖಪುಟಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

- Advertisement -
- Advertisement -

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ.

ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮತ್ತೆ ಆರಂಭಿಕ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆ.ಎಲ್ ರಾಹುಲ್ ಜವಾಬ್ದಾರಿಯುತ ಆಟವಾಡಿದರು. 32 ಎಸೆತಗಳಲ್ಲಿ 50 ರನ್ ಗಳಿಸಿದರು. ವಿರಾಟ್ ಕೊಹ್ಲಿ ಮತ್ತೊಮ್ಮೆ ಆಕರ್ಷಕ ಪ್ರದರ್ಶನ ನೀಡಿ 44 ಎಸೆತಗಳಲ್ಲಿ 64 ರನ್ ಗಳಿಸಿ ಭಾರತ ತಂಡ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿದ ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ ಕೇವಲ 5 ರನ್ ಗಳಿಸಿ ಔಟಾದರೆ ದಿನೇಶ್ ಕಾರ್ತಿಕ್ ಸಹ 07 ರನ್ ಗಳಿಸಿದ್ದಾಗ ರನ್ ಔಟ್ ಆದರು.

ಆಲ್ ರೌಂಡರ್ ಅಕ್ಸರ್ ಪಟೇಲ್ ರನ್ ಗಳಿಸಲು ತಿಣುಕಾಡಿದರು. ಆರ್. ಅಶ್ವಿನ್ ಕೊನೆಯಲ್ಲಿ 6 ಎಸೆತಗಳಲ್ಲಿ 13 ರನ್ ಗಳಿಸಿ ತಂಡಕ್ಕೆ ನೆರವಾದರು. ಭಾರತ ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು.

ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿತು.

ಛಲಬಿಡೆದೆ ಆಡಿದ ಬಾಂಗ್ಲಾದ ಸೋಹಾನ್ ಬೌಂಡರಿ ಮೇಲೆ ಬೌಂಡರಿ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಕೊನೆಯ ಓವರ್‌ನಲ್ಲಿ ಗೆಲುವಿಗೆ 21 ರನ್ ಗಳಿಸಬೇಕಿತ್ತು. ಆದರೆ ಸಾಧ್ಯವಾಗಲಿಲ್ಲ.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...