Homeರಾಜಕೀಯತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

- Advertisement -
- Advertisement -

ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಭಾರತದ ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ರಾಜ್ಯದ ಎಲ್ಲಾ ಪಕ್ಷಗಳಲ್ಲಿರುವ ‘ಸಮಾನ ಮನಸ್ಸಿನ’ ಸಂಸದರನ್ನು ಒತ್ತಾಯಿಸಿದೆ.

ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸತ್ತಿನ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದ್ದು, ಇತರೆ ಪಕ್ಷಗಳು ಈ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಯೊಂದು ದೇಶವೂ ಒಂದಲ್ಲ ಒಂದು ಧರ್ಮದ ಮೇಲೆ ಅವಲಂಬಿತವಾಗಿದ್ದು, ಭಾರತ ಕೂಡಾ ಇದಕ್ಕೆ ಹೊರತಾಗಿಲ್ಲ ಎಂಬ ರಾಜ್ಯಪಾಲ ರವಿ ಅವರ ಇತ್ತೀಚಿನ ಹೇಳಿಕೆಯನ್ನು ಟೀಕಿಸಿ 11 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆ ನೀಡಿದ ಎರಡು ದಿನಗಳ ನಂತರ ದ್ರಾವಿಡ ಮುನ್ನೇತ್ರ ಕಳಗಂ ಇತರೆ ಪಕ್ಷಗಳ ಸಂಸದರನ್ನು ವಿನಂತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉಚಿತ ಕೊಡುಗೆ ಚರ್ಚೆ; ಅಭಿವೃದ್ಧಿ ಜಿಡಿಪಿ ಮಾತ್ರವಾದಾಗ ಅನ್‌ಪ್ರೊಡಕ್ಟಿವ್ ಆಗುವ ಸವಲತ್ತುಗಳು

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರ್.ಎನ್. ರವಿ ಅವರು ತಮಿಳುನಾಡು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದರ ನಂತರ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರದೊಂದಿಗೆ ಸಂಘರ್ಷದಲ್ಲೆ ನಡೆಸುತ್ತಿದ್ದಾರೆ.

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಪರೀಕ್ಷೆಯನ್ನು ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಫೆಬ್ರವರಿಯಲ್ಲಿ ಮರುಪರಿಶೀಲನೆಗಾಗಿ ಅಸೆಂಬ್ಲಿಗೆ ಹಿಂದಿರುಗಿಸಿದ್ದರು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

NEET ನ ಪ್ರಶ್ನೆ ಪತ್ರಿಕೆಯು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಭಿನ್ನವಾಗಿದೆ. ನೀಟ್‌ ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಈ ಪರೀಕ್ಷೆಯನ್ನು ವಿರೋಧಿಸುತ್ತಿದೆ.

ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಆರೋಪಿಸಿತ್ತು.

ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ತಮಿಳುನಾಡಿಗೆ ರಾಜ್ಯಪಾಲರಾಗಿ ಆಗಮಿಸುವ ಮೊದಲು, ರವಿ ಅವರು ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿದ್ದರು ಮತ್ತು ನಾಗಾ ಶಾಂತಿ ಮಾತುಕತೆಗೆ ಕೇಂದ್ರದ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.  2020 ರಲ್ಲಿ ಕೇಂದ್ರ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲಿಮ್ (ಇಸಾಕ್-ಮುಯಿವಾ) ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು, ಸಂವಾದಕರಾಗಿದ್ದ ರವಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...