Homeಕರ್ನಾಟಕಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಾಗುತ್ತಿದ್ದು, ನಿರೀಕ್ಷೆಯಂತೆ ನಾಯಕರುಗಳ ಪಕ್ಷಾಂತರಗಳು ಪ್ರಾರಂಭವಾಗಿದೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ, ತುಮಕೂರಿನ ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಗುರುವಾರ ಬಿಜೆಪಿಗೆ ಸೇರಿದ್ದಾರೆ.

ಮುದ್ದಹನುಮೇಗೌಡ ಅವರ ಜೊತಗೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್‌ಕುಮಾರ್, ನಟ ಶಶಿಕುಮಾರ್ ಸೇರಿದಂತೆ ಹಲವರು ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುದ್ದಹನುಮೆಗೌಡ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ನ್ಯಾಯಧೀಶರಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿದ್ದ ಕಾರಣಕ್ಕೆ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಹೆಚ್.ಡಿ. ದೇವೇಗೌಡರಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಹೀಗಾಗಿ ಮುದ್ಧಹನುಮೆಗೌಡ ಅವರು ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡಿದ್ದರು.

ತಮ್ಮ ಪಕ್ಷದ ಹಿರಿಯ ನಾಯಕನ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮುದ್ದಹನುಮೆಗೌಡ ಅವರು ಸ್ವಲ್ಪ ದುಡಿಕಿ ತೀಮಾನ ತೆಗೆದುಕೊಂಡಿದ್ದು, ಒಂದು ವೇಳೆ ಪಕ್ಷದಲ್ಲೆ ಇರುತ್ತಿದ್ದರೆ ಪಕ್ಷದಿಂದ ಅವರಿಗೆ ಈ ಬಾರಿ ಅವಕಾಶ ಸಿಗುತ್ತಿತ್ತು ಎಂದು ಹೇಳಿದೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ ಅವರು, “ಮುದ್ದಹನುಮೆಗೌಡರು ತಮ್ಮ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರರಿದ್ದಾರೆ. ಆದರೆ ಅವರು ಬಿಜೆಪಿಗೆ ಹೋಗಿರುವುದು ಅವರು ನಂಬಿರುವಂತಹ ತತ್ವ ಸಿದ್ದಾಂತಗಳಿಗೆ ತದ್ವಿರುದ್ಧವಾಗಿದೆ. ಅಷ್ಟೆ ಅಲ್ಲದೆ ಬಿಜೆಪಿ ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳುತ್ತದೆ ಎಂಬುವುದು ಕೂಡಾ ನಮಗೆ ಅನುಮಾನವಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಅವರು ಇನ್ನೊಂದು ಸ್ವಲ್ಪ ತಾಳ್ಮೆಯಿಂದ ಇರಬೇಕಾಗಿತ್ತು ಎನ್ನುವುದು ನಮ್ಮ ನಿರೀಕ್ಷೆಯಾಗಿತ್ತು” ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಪಕ್ಷದ ಹಿರಿಯ ನಾಯಕ ವಿರೋಧಿ ಪಕ್ಷಕ್ಕೆ ಸೇರಿದರೆ ಪಕ್ಷ ಅದನ್ನು ಹೇಗೆ ಸರಿತೂಗಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಿಕೇತ್‌ ರಾಜ್, “ಬಂದದ್ದೆಲ್ಲವೂ ಬರಲಿ, ಭಗವಂತನ ದಯೆಯೊಂದಿರಲಿ ಎಂಬ ಮಾತಿನಂತೆ ಕಾಂಗ್ರೆಸ್‌ ಪಕ್ಷವಿದೆ. ಪಕ್ಷ ಬಿಟ್ಟು ಹೋಗುವವರನ್ನು ಯಾರೂ ತಡೆಹಾಕಿ ನಿಲ್ಲಿಸಲು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುವವರು ಹೇಗೆ ಇದ್ದಾರೋ ಹಾಗೆಯೆ, ಪಕ್ಷಕ್ಕೆ ಸೇರುವವರ ಸಂಖ್ಯೆ ಕೂಡಾ ಹೆಚ್ಚಾಗಿದೆ” ಎಂದು ಹೇಳಿದರು.

“ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ ಸಿಕ್ಕಿದ್ದು, ಜೆಡಿಎಸ್‌ ಎಮ್‌ಎಲ್‌ಸಿ ಬೆಮಲ್ ಕಾಂತರಾಜ್ ಸಿದ್ದರಾಗುತ್ತಿದ್ದಾರೆ. ಗುಬ್ಬಿ ಕ್ಷೇತ್ರದ ಶಾಸಕರು ಕೂಡಾ ಕಾಂಗ್ರೆಸ್ ಸೇರಲು ಸಿದ್ದರಾಗುತ್ತಿದ್ದಾರೆ. ಇದೇ ರೀತಿ ತುಮಕೂರು ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಜೆಡಿಎಸ್‌ನ ಹಾಲಿ ಶಾಸಕರಿಂದ ಹಿಡಿದು ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಸೇರಲು ತಯಾರಾಗುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ದೃತಿಗೆಡುವುದಿಲ್ಲ” ಎಂದು ನಿಕೇತ್ ರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಬಿಜೆಪಿ ನಾಯಕರ ಸೂಚನೆ ಮೇರೆಗೆ ತಮ್ಮ ನಿವೃತ್ತಿಯ ನಂತರ ಕೊರಟಗೆರೆ ಕ್ಷೇತ್ರದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಿದ್ದ ಅನಿಲ್‌ಕುಮಾರ್, ಈಗ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಅವರು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್‌ಕುಮಾರ್ 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ನಟ ಶಶಿಕುಮಾರ್ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್ ಸೇರಿದ್ದರು; ಇದೀಗ ಬಿಜೆಪಿ ಸೇರಿದ್ದಾರೆ. ಇಷ್ಟೆ ಅಲ್ಲದೆ ಸೇವಾ ದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ, ರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...