Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...