Homeಕ್ರೀಡೆಕ್ರಿಕೆಟ್ವಿರಾಟ್ ಕೊಹ್ಲಿ 'ನಕಲಿ ಫೀಲ್ಡಿಂಗ್' ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ: ಬಾಂಗ್ಲಾ ಕ್ರಿಕೆಟ್ ಮಂಡಳಿ ಆಕ್ಷೇಪ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 5 ರನ್‌ಗಳ ರೋಚಕ ಜಯ ಗಳಿಸಿದೆ. ಪಂದ್ಯದ ಕೊನೆಯ ಬಾಲ್‌ವರೆಗೂ ಕೂತೂಹಲ ಮೂಡಿಸಿದ್ದ ಪಂದ್ಯದಲ್ಲಿ ಭಾರತ ಜಯ ತನ್ನದಾಗಿಸಿಕೊಂಡಿತು. ಆದರೆ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ, ಆದರೆ ಫೀಲ್ಡ್ ಅಂಪೈರ್‌ಗಳು ಗಮನಿಸದ ಕಾರಣ ಬಾಂಗ್ಲಾದೇಶಕ್ಕೆ 5 ಅಮೂಲ್ಯ ರನ್‌ಗಳು ದೊರಕಿಲ್ಲ ಎಂದು ಬಾಂಗ್ಲಾ ಆಟಗಾರ ನೂರುಲ್ ಹಸನ್ ಆರೋಪಿಸಿದ್ದಾರೆ. ಬಾಂಗ್ಲಾ ಕ್ರಿಕೆಟ್ ಮಂಡಳಿ ಸಹ ಈ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

ಪಂದ್ಯದ ನಂತರ ಅಂಪೈರ್‌ಗಳ ತೀರ್ಮಾನವನ್ನು ಟೀಕಿಸಿರುವ ನೂರುಲ್, “ಪಂದ್ಯದಲ್ಲಿ ಬಾಂಗ್ಲಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 7ನೇ ಓವರ್‌ನಲ್ಲಿ ಈ ಘಟನೆ ಜರುಗಿದೆ. ಅಕ್ಸರ್ ಪಟೇಲ್ ಎಸೆದ ಎಸೆತವನ್ನು ಲಿಟನ್ ದಾಸ್ ದೀಪ್ ಕಡೆ ತಿರುಗಿಸಿದರು. ಅರ್ಶದೀಪ್ ಸಿಂಗ್ ಚೆಂಡನ್ನು ತಡೆದು ಕೀಪರ್ ಕಡೆ ಎಸೆದಾಗ ವಿರಾಟ್ ಕೊಹ್ಲಿ ಆ ಬಾಲ್ ಅನ್ನು ಹಿಡಿದು ನಾನ್ ಸ್ಟ್ರೈಕರ್ ಎಂಡ್‌ನ ವಿಕೆಟ್‌ಗಳಿಗೆ ಎಸೆಯುವಂತೆ ನಟನೆ ಮಾಡಿ ನಕಲಿ ಫೀಲ್ಡಿಂಗ್ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಆ ಕ್ಷಣವನ್ನು ಈ ಟ್ವಿಟರ್ ಪೋಸ್ಟ್‌ನಲ್ಲಿ ನೋಡಬಹುದು.

ICC ಆಟದ ನಿಯಮಗಳ 41.5ರ ಪ್ರಕಾರ ಇದು ಅನ್ಯಾಯದ ಆಟಕ್ಕೆ ಸಂಬಂಧಿಸಿದೆ. ಈ ನಿಯಮದ ಪ್ರಕಾರ ಬ್ಯಾಟರ್‌ಗಳಿಗೆ ಉದ್ದೇಶಪೂರ್ವಕವಾಗಿ ಅಡಚಣೆ, ವಂಚನೆ, ದಿಕ್ಕು ತಪ್ಪುಸುವ ಕೆಲಸವನ್ನು ಫೀಲ್ಡರ್‌ಗಳು ಮಾಡಬಾರದು. ಒಂದು ವೇಳೆ ಯಾರಾದರೂ ಈ ನಿಯಮವನ್ನು ಉಲ್ಲಂಘಿಸಿರುವುದನ್ನು ಅಂಪೈರ್ ಗಮನಿಸಿದರೆ, ಅವರು ಅದನ್ನು ಡೆಡ್ ಬಾಲ್ ಎಂದು ಕರೆಯಬಹುದು ಮತ್ತು ಎದುರಾಳಿ ತಂಡಕ್ಕೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬಹುದಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮುಂದಿನ ವಾರ ಮೆಲ್ಬೋರ್ನ್‌ನಲ್ಲಿ ಮಂಡಳಿಯ ಸಭೆಯನ್ನು ನಡೆಸಲಿದ್ದು, ಅಲ್ಲಿ ಅವಕಾಶ ಸಿಕ್ಕರೆ ಈ ವಿಷಯವನ್ನು ಪ್ರಸ್ತಾಪಿಸಲಾಗುತ್ತದೆ ಎಂದು BCB ಕ್ರಿಕೆಟ್ ಕಾರ್ಯಾಚರಣೆಗಳ ಮುಖ್ಯಸ್ಥ ಜಲಾಲ್ ಯೂನಸ್ AFP ಗೆ ತಿಳಿಸಿದ್ದಾರೆ.

ಭಾರತದ ನಿರಾಕರಣೆ:

ವಿರಾಟ್ ಕೊಹ್ಲಿ ಬಾಲ್ ಅನ್ನು ಥ್ರೋ ಮಾಡುವಂತೆ ನಟನೆ ಮಾಡುವ ಮೂಲಕ ನಕಲಿ ಫೀಲ್ಡಿಂಗ್ ಮಾಡಿದ್ದಾರೆ ಎಂಬುದನ್ನು ಭಾರತ ನಿರಾಕರಿಸಿದೆ. ವಿರಾಟ್ ಕೊಹ್ಲಿ ಹಾಗೆ ಮಾಡುವುದನ್ನು ಇಬ್ಬರೂ ಬ್ಯಾಟ್ಸ್‌ಮನ್‌ಗಳು ಸಹ ಗಮನಿಸಿಲ್ಲ. ಹಾಗೆಂದ ಮೇಲೆ ಅವರಿಗೆ ಅದರಿಂದ ಯಾವುದೇ ಅಡಚಣೆ ಆಗಿಲ್ಲದಿರುವಾಗ ನಿಯಮಗಳ ಉಲ್ಲಂಘನೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“ಬ್ಯಾಟಿಂಗ್ ಮಾಡುತ್ತಿದ್ದ ಲಿಟನ್ ದಾಸ್ ಮತ್ತು ಶಾಂಟೋ ಕೊಹ್ಲಿಯನ್ನು ಗಮನಿಸಿಲ್ಲ. ಹಾಗಾಗಿ ಅವರಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅಲ್ಲದೆ ಅಂಪೈರ್‌ಗಳ ಸಹ ಗಮನಿಸಿಲ್ಲ. ಕ್ರಿಕೆಟ್ ವೀಕ್ಷಣೆ ವಿವರಣೆಗಾರರು ಕೂಡ ಗಮನಿಸಿಲ್ಲ, ಈಗ ನೀವು ಏನು ಮಾಡುತ್ತೀರಿ” ಎಂದು ಹಿರಿಯ ಕ್ರಿಕೆಟ್ ತಜ್ಞ ಹರ್ಷ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್ 12 ಪಂದ್ಯದಲ್ಲಿ ಈ ರೀತಿಯಾಗಿ ಅಂಪೈರ್ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಏಕೆಂದರೆ ಆಫ್ರಿಕಾ ತಂಡದ ನೊಕಿಯೊ ಎಸೆತವನ್ನು ಮಿಲ್ಟಾನ್ ಸ್ಕೂಪ್ ಮಾಡಿದರು. ಆದರೆ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ತಮ್ಮ ಒಂದು ಗ್ಲೌಸ್ ಎಸೆದಿದ್ದರು. ಥರ್ಡ್ ಮ್ಯಾನ್ ಫೀಲ್ಡರ್ ಲುಂಗಿ ಎಂಗಿಡಿ ಚೆಂಡನ್ನು ಹಿಡಿದು ಲಾಂಗ್ ಥ್ರೋ ಮಾಡಿದರು. ಆದರೆ ಆ ಚೆಂಡು ವಿಕೆಟ್ ಕೀಪರ್ ಕೈ ಸೇರುವುದು ಬಿಟ್ಟು ಗ್ಲೌಸ್ ಮೇಲೆ ಬಿದ್ದಿತು. ಇದನ್ನು ಗಮನಿಸಿದ ಅಂಪೈರ್ ಬೈಸ್ ರೂಪದಲ್ಲಿ ಜಿಂಬಾಬ್ವೆ ತಂಡಕ್ಕೆ 5 ಪೆನಾಲ್ಟಿ ರನ್ ನೀಡಿದ್ದರು. ಅದನ್ನು ಕೆಳಗಿನ ಟ್ವಿಟರ್ ಪೋಸ್ಟ್‌ನಲ್ಲಿ ಗಮನಿಸಬಹುದು.

ಅದೇ ರೀತಿಯಾಗಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 5 ಪೆನಾಲ್ಟಿ ರನ್‌ಗಳನ್ನು ಪಡೆದಿತ್ತು. ಏಕೆಂದರೆ ಬಾಂಗ್ಲಾ ತಂಡದ ನಾಯಕ ಶಕೀಬ್ ಬೌಲ್ ಮಾಡಲು ಆರಂಭಿಸಿದಾಗ ವಿಕೆಟ್ ಕೀಪರ್ ನೂರುಲ್ ಹಸನ್ ತಮ್ಮ ಎಡಗಾಲನ್ನು ಎತ್ತಿ ಇಟ್ಟಿದ್ದರು. ಬೌಲರ್ ಬಾಲ್ ಮಾಡಲು ಓಡಲು ಶುರು ಮಾಡಿದ ನಂತರ ವಿಕೆಟ್ ಕೀಪರ್ ಯಾವುದೇ ಚಲನೆ ಮಾಡುವಂತಿಲ್ಲ ಎಂಬ ನಿಯಮವನ್ನು ಮೀರಿದ್ದರು. ಹಾಗಾಗಿ ಬಾಂಗ್ಲಾ ತಂಡಕ್ಕೆ ಪೆನಾಲ್ಟಿ ಹಾಕಿ ದಕ್ಷಿಣ ಆಫ್ರಿಕಾ ತಂಡಕ್ಕೆ 5 ರನ್ ನೀಡಲಾಗಿತ್ತು.

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ. ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ (32 ಎಸೆತಗಳಲ್ಲಿ 50 ರನ್) ವಿರಾಟ್ ಕೊಹ್ಲಿ (44 ಎಸೆತಗಳಲ್ಲಿ 64 ರನ್) ಮತ್ತು ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್) ನೆರವಿನಿಂದ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು. ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿ ಕೊನೆಯ ಎಸೆತದಲ್ಲಿ ಬಾಂಗ್ಲಾ 05 ರನ್‌ಗಳ ಸೋಲೊಪ್ಪಿಕೊಂಡಿತು.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ಇದನ್ನೂ ಓದಿ; ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...