Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...