Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....