Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...