Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...