Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...