Homeಕರ್ನಾಟಕಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಮಸಣ ಕಾರ್ಮಿಕರು ಎದುರಿಸುವ ಸವಾಲುಗಳು ಅನೇಕ. ಸರ್ಕಾರದಿಂದ ಈ ದಲಿತರಿಗೆ ವೇತನ ನಿಗದಿಯಾಗಬೇಕಿದೆ.

- Advertisement -
- Advertisement -

ಉತ್ತರ ಕರ್ನಾಟಕದ ಅನೇಕ ದಲಿತ ಕಾರ್ಮಿಕರನ್ನು ‘ಬಿಟ್ಟಿ ಚಕ್ರಿ’ ಎಂಬ ಜೀತಗಾರಿಕೆಗೆ ತಳ್ಳಲಾಗಿದೆ. ಸ್ಮಶಾನದಲ್ಲಿ ಹೆಣಗಳನ್ನು ಸುಡುವ ಇಂತಹ ಅನೇಕ ಕಾರ್ಮಿಕರು ಯಾವುದೇ ಆದಾಯವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ತಾವೇ ಸಂಘಟಿತರಾಗಿ ತಮ್ಮ ದನಿ ಎತ್ತಲು ಮುಂದಾಗಿದ್ದಾರೆ.

ವಿಜಯನಗರ ಜಿಲ್ಲೆಯ ಆದಿ ಕರ್ನಾಟಕ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಏಣಗಿ ಸಣ್ಣಹನುಮಂತಪ್ಪ (50) ಅವರು ‘ನ್ಯೂಸ್‌ಕ್ಲಿಕ್‌’ ಜಾಲತಾಣದೊಂದಿಗೆ ಮಾತನಾಡಿದ್ದು, ತಮ್ಮ ಬದುಕು- ಬವಣೆ ಹಾಗೂ ಸಂಘಟನೆಯ ಕುರಿತು ವಿವರಿಸಿದ್ದಾರೆ.

“ಹಲವು ಶತಮಾನಗಳಿಂದ ಮಸಣ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ, ಇಷ್ಟು ದಿನ ವೇತನ ಇಲ್ಲದೇ ಕೆಲಸ ಮಾಡಿದ್ದೇವೆ, ಈಗ ಸರಕಾರ ನಮ್ಮ ದುಡಿಮೆಗೆ ತಕ್ಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದಲಿತ ಕಾರ್ಮಿಕರು ಮಾಡುವ ಕೆಲಸಕ್ಕೆ ಸರ್ಕಾರದಿಂದ ಯಾವುದೇ ಹಣ ಸಂದಾಯವಾಗುತ್ತಿಲ್ಲ. ಯಾರಾದರೂ ಒಬ್ಬ ವ್ಯಕ್ತಿ ಸತ್ತಾಗ ದೇಹವನ್ನು ವಿಲೇವಾರಿ ಮಾಡಲು ಈ ಕಾರ್ಮಿಕರನ್ನು ಕರೆಸಲಾಗುತ್ತದೆ. ಸಾವಿಗೀಡಾದ ವ್ಯಕ್ತಿಯ ಕುಟುಂಬವು ಈ ಕಾರ್ಮಿಕರಿಗೆ ಕೊಡಬೇಕಾದ ಕೂಲಿಯನ್ನು ನಿರ್ಧರಿಸುತ್ತದೆ.

ಈ ಕೆಲಸ ಜಾತಿ ಆಧಾರಿತ, ಪಾರಂಪರಿಕ ದುಡಿಮೆಯಾಗಿ ಬೆಳೆದುಬಿಟ್ಟಿದೆ. ಬೇರೆ ಯಾವುದೇ ಸಮುದಾಯದವರು ಈ ಕೆಲಸ ಮಾಡಲು ಸಿದ್ಧರಿಲ್ಲ. ‘ಬಿಟ್ಟಿ ಚಕ್ರಿ’ ಎಂದು ಕರೆಯಲ್ಪಡುವ ಈ ಪದ್ಧತಿಯು ಉತ್ತರ ಕರ್ನಾಟಕದಲ್ಲಿ ಪ್ರಚಲಿತದಲ್ಲಿದೆ. ಕಾರ್ಮಿಕರನ್ನು ಜೀತಗಾರಿಕೆಗೆ ತಳ್ಳಲಾಗಿದೆ. ಶವಗಳನ್ನು ಹೂಳಲು ಗುಂಡಿ ತಗೆಯುತ್ತಾರೆ. ಆದರೆ ಇವರಿಗೆ ಸಿಗುವ ಕೂಲಿ ಯಾವಾಗಲೂ ಅತ್ಯಲ್ಪ.

ಈ ಕಾರ್ಮಿಕರು ತಮ್ಮ ಕೆಲಸದ ಸಮಯದಲ್ಲಿ ಹಲವಾರು ದೌರ್ಜನ್ಯಗಳಿಗೆ ಒಳಗಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಅತ್ರಿಕ್ರಮಣ ಮಾಡುತ್ತಾರೆ. ಹೀಗಾಗಿ ಸಮಾಧಿಗಳಿಗೆ ಸ್ಥಳಾವಕಾಶ ಕಡಿಮೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಮಸಣ ಕಾರ್ಮಿಕರು ಹಳೆಯ ಸಮಾಧಿಗಳನ್ನು ಅಗೆದು ಕೊಳೆತ ಅಥವಾ ಅರ್ಧ ಕೊಳೆತ ಶವಗಳನ್ನು ಕೈಯಿಂದ ಹೊರಗೆಳೆಯುತ್ತಾರೆ. ಹೊಸ ಶವಕ್ಕೆ ಹಳೆಯ ಸಮಾಧಿಯನ್ನು ಬಳಸುತ್ತಾರೆ. ನಂತರ ಕೊಳೆತ ದೇಹವನ್ನು ಹತ್ತಿರದ ಹೊಲಕ್ಕೆ ಒಯ್ದು ಸುಡಲಾಗುತ್ತದೆ. ಇದಕ್ಕಾಗಿ ಕೈಗವಸು ಅಥವಾ ವಿಶೇಷ ಉಪಕರಣಗಳನ್ನು ಬಳಸುವುದಿಲ್ಲ ಎಂದು ಸಣ್ಣಹನುಮಂತಪ್ಪ ಹೇಳುತ್ತಾರೆ.

ಒಂಟಿಯಾಗಿ ವಾಸಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದ ನಿದರ್ಶನಗಳನ್ನು ಕೋವಿಡ್ ಸಂದರ್ಭದಲ್ಲಿ ಈ ಮಸಣ ಕಾರ್ಮಿಕರು ಎದುರಿಸಿದ್ದಾರೆ. ಯಾವುದೇ ವೇತನವಿಲ್ಲದೆ ಇಂತಹ ಕೊಳೆತ ಶವಗಳನ್ನು ವಿಲೇವಾರಿ ಮಾಡಿದ ಉದಾಹರಣೆಗಳಿವೆ.

ಗ್ರಾಮೀಣ ಪ್ರದೇಶಗಳಲ್ಲಿ ಬರ ಮತ್ತು ಮಳೆಗೆ ಸಂಬಂಧಿಸಿದಂತೆ ಹಲವಾರು ಮೂಢನಂಬಿಕೆಗಳಿವೆ. ಬರಗಾಲದ ಸಂದರ್ಭದಲ್ಲಿ ಸ್ಥಳೀಯರು ಮಳೆಗಾಗಿ ಪ್ರಾರ್ಥಿಸಿ ಕೆಲವು ಆಚರಣೆಗಳನ್ನು ಹಮ್ಮಿಕೊಳ್ಳುತ್ತಾರೆ. ಕಪ್ಪೆ ಮೆರವಣಿಗೆ, ಕತ್ತೆ ಮೆರವಣಿಗೆ, ಭಜನೆ ಓದುವುದು, ಪುರಾಣ ಓದುವುದು ಇತ್ಯಾದಿ ಮಾಡುತ್ತಾರೆ. ಬರ ನೀಗುವುದೆಂದು ಇವುಗಳನ್ನು ಹಮ್ಮಿಕೊಳ್ಳುತ್ತಾರೆ. ಅದೇ ರೀತಿ ಮೃತ ದೇಹವು ಸಂಪೂರ್ಣವಾಗಿ ಕೊಳೆಯದಿದ್ದಾಗ ಬರಗಾಲ ಉಂಟಾಗುತ್ತದೆ ಎಂಬ ಮೂಢನಂಬಿಕೆಯೂ ಇದೆ. ಆದ್ದರಿಂದ ಎಲ್ಲಾ ಸಮಾಧಿಗಳನ್ನು ಮತ್ತೆ ಅಗೆದು, ದೇಹಗಳನ್ನು ಪರೀಕ್ಷಿಸುವಂತೆ ಈ ಕಾರ್ಮಿಕರ ಮೇಲೆ ಒತ್ತಡ ಹೇರಿದ ನಿದರ್ಶನಗಳಿವೆ. ಯಾವುದಾದರೂ ಶವ ಸಾಕಷ್ಟು ಕೊಳೆಯದಿದ್ದರೆ, ಅಂತಹ ದೇಹವನ್ನು ಹೊರಗೆಳೆದು ಬಿಟ್ಟಿಯಾಗಿ ಸುಡಬೇಕಾಗುತ್ತದೆ.

ಸಣ್ಣಹನುಮಂತಪ್ಪ ಮಾತು ಮುಂದುವರಿಸುತ್ತಾ, “ನನ್ನ ಅಪ್ಪ, ತಾತ ಈ ಕೆಲಸ ಮಾಡ್ತಾ ಇದ್ದರು. ಈಗ ನಾನೂ ಮಾಡ್ತಾ ಇದ್ದೀನಿ. ಆದ್ರೆ ಮಗ ಈ ಕೆಲಸ ಮಾಡೋದು ಬೇಡ” ಎನ್ನುತ್ತಾರೆ.

ಮಂಗಳವಾರ ಬೆಂಗಳೂರಿನ ಇಎಂಎಸ್ ಭವನದಲ್ಲಿ ಸ್ಮಶಾನದ ಕಾರ್ಮಿಕರು ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮನ್ನು ಸಫಾಯಿ ಕರ್ಮಚಾರಿಗಳೆಂದು ಗುರುತಿಸಬೇಕು, ಮೃತ ದೇಹಗಳನ್ನು ಹೂಳಲು ಮತ್ತು ವಿಲೇವಾರಿ ಮಾಡಲು ಯೋಗ್ಯವಾದ ವೇತನವನ್ನು ನಿಗದಿಪಡಿಸಬೇಕು ಎಂದು ಆಶಿಸಿದರು. ‘ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘಟನೆ’ ಎಂಬ ಬ್ಯಾನರ್ ಅಡಿಯಲ್ಲಿ ಈ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಈ ಸಭೆಯನ್ನು ಹಮ್ಮಿಕೊಂಡಿತ್ತು.

ದೇವದಾಸಿಯರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ(ಎಂ) ಸಂಘಟಕಿ ಬಿ.ಮಾಳಮ್ಮ ಅವರೊಂದಿಗೆ ಸಂವಾದ ನಡೆಸಿದ ನಂತರ ಮಸಣ ಕಾರ್ಮಿಕರು ಒಗ್ಗೂಡಲು ನಿರ್ಧರಿಸಿದ್ದಾರೆ. ಒಗ್ಗೂಡಿ ಸಂಘ ರಚಿಸುವ ಆಲೋಚನೆ ಬಂದಿದೆ ಎಂದು ಸಣ್ಣಹನುಮಂತಪ್ಪ ವಿವರಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

“ಮಾಳಮ್ಮ ಅಕ್ಕ ನಮ್ಮ ಹಳ್ಳಿಗಳಿಗೆ ಬಂದು ಮಸಣ ಕಾರ್ಮಿಕರ ಸಮೀಕ್ಷೆ ಮಾಡಿಸಿದರು. ಒಗ್ಗೂಡಿ ಸಂಘ ಕಟ್ಟಿದರೆ ಸರಕಾರದ ಮುಂದೆ ನಿಮ್ಮ ಬೇಡಿಕೆಗಳನ್ನು ಇಡಬಹುದು ಎಂದು ಹೇಳಿದ್ದರು. ಮಾಳಮ್ಮ ಅಕ್ಕನಿಗಿಂತ ಮುಂಚೆ ಯಾರೂ ನಮ್ಮ ಬಗ್ಗೆ ವಿಚಾರಿಸಿದವರಿಲ್ಲ” ಎಂದಿದ್ದಾರೆ.

ಅಂತಹ ದುರ್ಬಲ ಕಾರ್ಮಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ಮಾಳಮ್ಮ ಅವರು 2014ರಲ್ಲಿ ವಹಿಸಿಕೊಂಡರು. ಅವರು ಅನುಭವಿ ಸಂಘಟಕಿ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿಯೂ ಹೌದು.

‘ನ್ಯೂಸ್‌ಕ್ಲಿಕ್‌’ನೊಂದಿಗೆ ಮಾತನಾಡಿರುವಅವರು, “ಸಮಾಧಿಯನ್ನು ತೋಡುವುದನ್ನು ಹೊರತುಪಡಿಸಿ ಅನೇಕ ಕೆಲಸಗಳನ್ನು ಈ ಕಾರ್ಮಿಕರು ಮಾಡುತ್ತಾರೆ. ಶವಕ್ಕೆ ಸಂಬಂಧಿಸಿದ ಕೊಳಕಾದ ವಸ್ತುಗಳನ್ನೂ ವಿಲೇವಾರಿ ಮಾಡಬೇಕಾಗಿರುತ್ತದೆ. ಶವದೊಂದಿಗೆ ವಿಧಿ ವಿಧಾನಗಳಲ್ಲಿ ಬಳಸುವ ಹಣ್ಣು-ಹಂಪಲುಗಳನ್ನು ವಿಲೇವಾರಿ ಮಾಡಬೇಕಿರುತ್ತದೆ. ಶವ ಸಂಸ್ಕಾರಕ್ಕೆ ಬೇಕಾದ ಸೌದೆಯನ್ನು ಕಾಡಿಗೆ ಹೋಗಿ ಕಡಿದು ತರಬೇಕಿರುತ್ತದೆ. ಇವರಿಗೆ ಯಾವುದೇ ವಾಹನ ಸೌಲಭ್ಯವೂ ಇಲ್ಲದೆ ತಲೆಯ ಮೇಲೆ ಕಟ್ಟಿಗೆಗಳನ್ನು ಹೊತ್ತು ಸಾಗಿಸಬೇಕಾಗುತ್ತದೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂಸ್‌ಕ್ಲಿಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...