Homeಕರ್ನಾಟಕಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಮಸಣ ಕಾರ್ಮಿಕರು ಎದುರಿಸುವ ಸವಾಲುಗಳು ಅನೇಕ. ಸರ್ಕಾರದಿಂದ ಈ ದಲಿತರಿಗೆ ವೇತನ ನಿಗದಿಯಾಗಬೇಕಿದೆ.

- Advertisement -
- Advertisement -

ಉತ್ತರ ಕರ್ನಾಟಕದ ಅನೇಕ ದಲಿತ ಕಾರ್ಮಿಕರನ್ನು ‘ಬಿಟ್ಟಿ ಚಕ್ರಿ’ ಎಂಬ ಜೀತಗಾರಿಕೆಗೆ ತಳ್ಳಲಾಗಿದೆ. ಸ್ಮಶಾನದಲ್ಲಿ ಹೆಣಗಳನ್ನು ಸುಡುವ ಇಂತಹ ಅನೇಕ ಕಾರ್ಮಿಕರು ಯಾವುದೇ ಆದಾಯವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ತಾವೇ ಸಂಘಟಿತರಾಗಿ ತಮ್ಮ ದನಿ ಎತ್ತಲು ಮುಂದಾಗಿದ್ದಾರೆ.

ವಿಜಯನಗರ ಜಿಲ್ಲೆಯ ಆದಿ ಕರ್ನಾಟಕ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಏಣಗಿ ಸಣ್ಣಹನುಮಂತಪ್ಪ (50) ಅವರು ‘ನ್ಯೂಸ್‌ಕ್ಲಿಕ್‌’ ಜಾಲತಾಣದೊಂದಿಗೆ ಮಾತನಾಡಿದ್ದು, ತಮ್ಮ ಬದುಕು- ಬವಣೆ ಹಾಗೂ ಸಂಘಟನೆಯ ಕುರಿತು ವಿವರಿಸಿದ್ದಾರೆ.

“ಹಲವು ಶತಮಾನಗಳಿಂದ ಮಸಣ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ, ಇಷ್ಟು ದಿನ ವೇತನ ಇಲ್ಲದೇ ಕೆಲಸ ಮಾಡಿದ್ದೇವೆ, ಈಗ ಸರಕಾರ ನಮ್ಮ ದುಡಿಮೆಗೆ ತಕ್ಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದಲಿತ ಕಾರ್ಮಿಕರು ಮಾಡುವ ಕೆಲಸಕ್ಕೆ ಸರ್ಕಾರದಿಂದ ಯಾವುದೇ ಹಣ ಸಂದಾಯವಾಗುತ್ತಿಲ್ಲ. ಯಾರಾದರೂ ಒಬ್ಬ ವ್ಯಕ್ತಿ ಸತ್ತಾಗ ದೇಹವನ್ನು ವಿಲೇವಾರಿ ಮಾಡಲು ಈ ಕಾರ್ಮಿಕರನ್ನು ಕರೆಸಲಾಗುತ್ತದೆ. ಸಾವಿಗೀಡಾದ ವ್ಯಕ್ತಿಯ ಕುಟುಂಬವು ಈ ಕಾರ್ಮಿಕರಿಗೆ ಕೊಡಬೇಕಾದ ಕೂಲಿಯನ್ನು ನಿರ್ಧರಿಸುತ್ತದೆ.

ಈ ಕೆಲಸ ಜಾತಿ ಆಧಾರಿತ, ಪಾರಂಪರಿಕ ದುಡಿಮೆಯಾಗಿ ಬೆಳೆದುಬಿಟ್ಟಿದೆ. ಬೇರೆ ಯಾವುದೇ ಸಮುದಾಯದವರು ಈ ಕೆಲಸ ಮಾಡಲು ಸಿದ್ಧರಿಲ್ಲ. ‘ಬಿಟ್ಟಿ ಚಕ್ರಿ’ ಎಂದು ಕರೆಯಲ್ಪಡುವ ಈ ಪದ್ಧತಿಯು ಉತ್ತರ ಕರ್ನಾಟಕದಲ್ಲಿ ಪ್ರಚಲಿತದಲ್ಲಿದೆ. ಕಾರ್ಮಿಕರನ್ನು ಜೀತಗಾರಿಕೆಗೆ ತಳ್ಳಲಾಗಿದೆ. ಶವಗಳನ್ನು ಹೂಳಲು ಗುಂಡಿ ತಗೆಯುತ್ತಾರೆ. ಆದರೆ ಇವರಿಗೆ ಸಿಗುವ ಕೂಲಿ ಯಾವಾಗಲೂ ಅತ್ಯಲ್ಪ.

ಈ ಕಾರ್ಮಿಕರು ತಮ್ಮ ಕೆಲಸದ ಸಮಯದಲ್ಲಿ ಹಲವಾರು ದೌರ್ಜನ್ಯಗಳಿಗೆ ಒಳಗಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಅತ್ರಿಕ್ರಮಣ ಮಾಡುತ್ತಾರೆ. ಹೀಗಾಗಿ ಸಮಾಧಿಗಳಿಗೆ ಸ್ಥಳಾವಕಾಶ ಕಡಿಮೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಮಸಣ ಕಾರ್ಮಿಕರು ಹಳೆಯ ಸಮಾಧಿಗಳನ್ನು ಅಗೆದು ಕೊಳೆತ ಅಥವಾ ಅರ್ಧ ಕೊಳೆತ ಶವಗಳನ್ನು ಕೈಯಿಂದ ಹೊರಗೆಳೆಯುತ್ತಾರೆ. ಹೊಸ ಶವಕ್ಕೆ ಹಳೆಯ ಸಮಾಧಿಯನ್ನು ಬಳಸುತ್ತಾರೆ. ನಂತರ ಕೊಳೆತ ದೇಹವನ್ನು ಹತ್ತಿರದ ಹೊಲಕ್ಕೆ ಒಯ್ದು ಸುಡಲಾಗುತ್ತದೆ. ಇದಕ್ಕಾಗಿ ಕೈಗವಸು ಅಥವಾ ವಿಶೇಷ ಉಪಕರಣಗಳನ್ನು ಬಳಸುವುದಿಲ್ಲ ಎಂದು ಸಣ್ಣಹನುಮಂತಪ್ಪ ಹೇಳುತ್ತಾರೆ.

ಒಂಟಿಯಾಗಿ ವಾಸಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದ ನಿದರ್ಶನಗಳನ್ನು ಕೋವಿಡ್ ಸಂದರ್ಭದಲ್ಲಿ ಈ ಮಸಣ ಕಾರ್ಮಿಕರು ಎದುರಿಸಿದ್ದಾರೆ. ಯಾವುದೇ ವೇತನವಿಲ್ಲದೆ ಇಂತಹ ಕೊಳೆತ ಶವಗಳನ್ನು ವಿಲೇವಾರಿ ಮಾಡಿದ ಉದಾಹರಣೆಗಳಿವೆ.

ಗ್ರಾಮೀಣ ಪ್ರದೇಶಗಳಲ್ಲಿ ಬರ ಮತ್ತು ಮಳೆಗೆ ಸಂಬಂಧಿಸಿದಂತೆ ಹಲವಾರು ಮೂಢನಂಬಿಕೆಗಳಿವೆ. ಬರಗಾಲದ ಸಂದರ್ಭದಲ್ಲಿ ಸ್ಥಳೀಯರು ಮಳೆಗಾಗಿ ಪ್ರಾರ್ಥಿಸಿ ಕೆಲವು ಆಚರಣೆಗಳನ್ನು ಹಮ್ಮಿಕೊಳ್ಳುತ್ತಾರೆ. ಕಪ್ಪೆ ಮೆರವಣಿಗೆ, ಕತ್ತೆ ಮೆರವಣಿಗೆ, ಭಜನೆ ಓದುವುದು, ಪುರಾಣ ಓದುವುದು ಇತ್ಯಾದಿ ಮಾಡುತ್ತಾರೆ. ಬರ ನೀಗುವುದೆಂದು ಇವುಗಳನ್ನು ಹಮ್ಮಿಕೊಳ್ಳುತ್ತಾರೆ. ಅದೇ ರೀತಿ ಮೃತ ದೇಹವು ಸಂಪೂರ್ಣವಾಗಿ ಕೊಳೆಯದಿದ್ದಾಗ ಬರಗಾಲ ಉಂಟಾಗುತ್ತದೆ ಎಂಬ ಮೂಢನಂಬಿಕೆಯೂ ಇದೆ. ಆದ್ದರಿಂದ ಎಲ್ಲಾ ಸಮಾಧಿಗಳನ್ನು ಮತ್ತೆ ಅಗೆದು, ದೇಹಗಳನ್ನು ಪರೀಕ್ಷಿಸುವಂತೆ ಈ ಕಾರ್ಮಿಕರ ಮೇಲೆ ಒತ್ತಡ ಹೇರಿದ ನಿದರ್ಶನಗಳಿವೆ. ಯಾವುದಾದರೂ ಶವ ಸಾಕಷ್ಟು ಕೊಳೆಯದಿದ್ದರೆ, ಅಂತಹ ದೇಹವನ್ನು ಹೊರಗೆಳೆದು ಬಿಟ್ಟಿಯಾಗಿ ಸುಡಬೇಕಾಗುತ್ತದೆ.

ಸಣ್ಣಹನುಮಂತಪ್ಪ ಮಾತು ಮುಂದುವರಿಸುತ್ತಾ, “ನನ್ನ ಅಪ್ಪ, ತಾತ ಈ ಕೆಲಸ ಮಾಡ್ತಾ ಇದ್ದರು. ಈಗ ನಾನೂ ಮಾಡ್ತಾ ಇದ್ದೀನಿ. ಆದ್ರೆ ಮಗ ಈ ಕೆಲಸ ಮಾಡೋದು ಬೇಡ” ಎನ್ನುತ್ತಾರೆ.

ಮಂಗಳವಾರ ಬೆಂಗಳೂರಿನ ಇಎಂಎಸ್ ಭವನದಲ್ಲಿ ಸ್ಮಶಾನದ ಕಾರ್ಮಿಕರು ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮನ್ನು ಸಫಾಯಿ ಕರ್ಮಚಾರಿಗಳೆಂದು ಗುರುತಿಸಬೇಕು, ಮೃತ ದೇಹಗಳನ್ನು ಹೂಳಲು ಮತ್ತು ವಿಲೇವಾರಿ ಮಾಡಲು ಯೋಗ್ಯವಾದ ವೇತನವನ್ನು ನಿಗದಿಪಡಿಸಬೇಕು ಎಂದು ಆಶಿಸಿದರು. ‘ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘಟನೆ’ ಎಂಬ ಬ್ಯಾನರ್ ಅಡಿಯಲ್ಲಿ ಈ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಈ ಸಭೆಯನ್ನು ಹಮ್ಮಿಕೊಂಡಿತ್ತು.

ದೇವದಾಸಿಯರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ(ಎಂ) ಸಂಘಟಕಿ ಬಿ.ಮಾಳಮ್ಮ ಅವರೊಂದಿಗೆ ಸಂವಾದ ನಡೆಸಿದ ನಂತರ ಮಸಣ ಕಾರ್ಮಿಕರು ಒಗ್ಗೂಡಲು ನಿರ್ಧರಿಸಿದ್ದಾರೆ. ಒಗ್ಗೂಡಿ ಸಂಘ ರಚಿಸುವ ಆಲೋಚನೆ ಬಂದಿದೆ ಎಂದು ಸಣ್ಣಹನುಮಂತಪ್ಪ ವಿವರಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

“ಮಾಳಮ್ಮ ಅಕ್ಕ ನಮ್ಮ ಹಳ್ಳಿಗಳಿಗೆ ಬಂದು ಮಸಣ ಕಾರ್ಮಿಕರ ಸಮೀಕ್ಷೆ ಮಾಡಿಸಿದರು. ಒಗ್ಗೂಡಿ ಸಂಘ ಕಟ್ಟಿದರೆ ಸರಕಾರದ ಮುಂದೆ ನಿಮ್ಮ ಬೇಡಿಕೆಗಳನ್ನು ಇಡಬಹುದು ಎಂದು ಹೇಳಿದ್ದರು. ಮಾಳಮ್ಮ ಅಕ್ಕನಿಗಿಂತ ಮುಂಚೆ ಯಾರೂ ನಮ್ಮ ಬಗ್ಗೆ ವಿಚಾರಿಸಿದವರಿಲ್ಲ” ಎಂದಿದ್ದಾರೆ.

ಅಂತಹ ದುರ್ಬಲ ಕಾರ್ಮಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ಮಾಳಮ್ಮ ಅವರು 2014ರಲ್ಲಿ ವಹಿಸಿಕೊಂಡರು. ಅವರು ಅನುಭವಿ ಸಂಘಟಕಿ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿಯೂ ಹೌದು.

‘ನ್ಯೂಸ್‌ಕ್ಲಿಕ್‌’ನೊಂದಿಗೆ ಮಾತನಾಡಿರುವಅವರು, “ಸಮಾಧಿಯನ್ನು ತೋಡುವುದನ್ನು ಹೊರತುಪಡಿಸಿ ಅನೇಕ ಕೆಲಸಗಳನ್ನು ಈ ಕಾರ್ಮಿಕರು ಮಾಡುತ್ತಾರೆ. ಶವಕ್ಕೆ ಸಂಬಂಧಿಸಿದ ಕೊಳಕಾದ ವಸ್ತುಗಳನ್ನೂ ವಿಲೇವಾರಿ ಮಾಡಬೇಕಾಗಿರುತ್ತದೆ. ಶವದೊಂದಿಗೆ ವಿಧಿ ವಿಧಾನಗಳಲ್ಲಿ ಬಳಸುವ ಹಣ್ಣು-ಹಂಪಲುಗಳನ್ನು ವಿಲೇವಾರಿ ಮಾಡಬೇಕಿರುತ್ತದೆ. ಶವ ಸಂಸ್ಕಾರಕ್ಕೆ ಬೇಕಾದ ಸೌದೆಯನ್ನು ಕಾಡಿಗೆ ಹೋಗಿ ಕಡಿದು ತರಬೇಕಿರುತ್ತದೆ. ಇವರಿಗೆ ಯಾವುದೇ ವಾಹನ ಸೌಲಭ್ಯವೂ ಇಲ್ಲದೆ ತಲೆಯ ಮೇಲೆ ಕಟ್ಟಿಗೆಗಳನ್ನು ಹೊತ್ತು ಸಾಗಿಸಬೇಕಾಗುತ್ತದೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂಸ್‌ಕ್ಲಿಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...