Homeಅಂತರಾಷ್ಟ್ರೀಯನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

ನ್ಯೂಜೆರ್ಸಿ: ಮುಸ್ಲಿಂ ದ್ವೇಷ ಕಾರಿದ ಹಿಂದೂ ಮತೀಯವಾದಿ ಹೇಳಿಕೆಗೆ ಟೀನೆಕ್ ಮೇಯರ್‌ ಕ್ಷಮೆಯಾಚನೆ

- Advertisement -
- Advertisement -

ನ್ಯೂಜೆರ್ಸಿ: ಸೆಪ್ಟೆಂಬರ್‌ನಲ್ಲಿ ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಹಿಂದೂ ಮತೀಯವಾದಿಯ ಹೇಳಿಕೆಗೆ ನ್ಯೂಜೆರ್ಸಿಯ ಟೀನೆಕ್ ಟೌನ್‌ಶಿಪ್‌ನ ಮೇಯರ್ ಮತ್ತು ಇಬ್ಬರು ಸಿಟಿ ಕೌನ್ಸಿಲ್ ಸದಸ್ಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಮತೀಯವಾದಿಗಳಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ಈ ಭಾಷಣವು ರಾಜ್ಯಾದ್ಯಂತ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು.

ಮುಸ್ಲಿಂ ಸಮುದಾಯದ ವಿರುದ್ಧದ ದ್ವೇಷವನ್ನು ಖಂಡಿಸುವ ಅಧಿಕೃತ ಹೇಳಿಕೆಯನ್ನು ಅಕ್ಟೋಬರ್ 28 ರಂದು ಮೇಯರ್ ಜಿಮ್ ಡನ್ಲೆವಿ ಬಿಡುಗಡೆ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯು ತೀವ್ರತರವಾದದ್ದು. ಈ ಅಪಾಯಕಾರಿ ಮತೀಯವಾದಿಗಳಿಗೆ ಟೀನೆಕ್ ಅಥವಾ ನ್ಯೂಜೆರ್ಸಿಯಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ‘ಕ್ಲಾರಿಯಾನ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 25ರಂದು ನಡೆದ ಸಿಟಿ ಕೌನ್ಸಿಲ್ ಸಭೆಯಲ್ಲಿ ಮೇಯರ್ ಮತ್ತು ಕೌನ್ಸಿಲ್ ಸದಸ್ಯರು ಜನರಲ್ಲಿ ಕ್ಷಮೆಯಾಚಿಸಿದ್ದರು. ಈ ಸಮಯದಲ್ಲಿ ಹಲವಾರು ಮುಸ್ಲಿಂ ಸದಸ್ಯರು, ಹಿಂದೂ ಉಗ್ರಗಾಮಿಗಳ ಮುಸ್ಲಿಂ ವಿರೋಧಿ ವರ್ತನೆ ಹಾಗೂ ವಿಷಕಾರಿ ಹೇಳಿಕೆಗಳ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

“ಇಸ್ಲಾಂ ವಿರುದ್ಧ ದ್ವೇಷ ಕಾರಿದ ವ್ಯಕ್ತಿಯನ್ನು ತಕ್ಷಣವೇ ತಡೆದು ನಿಲ್ಲಿಸಬೇಕಿತ್ತು” ಎಂದು ಕೌನ್ಸಿಲ್ಮನ್ ಕೀತ್ ಕಪ್ಲಾನ್ ಹೇಳಿದ್ದಾರೆ.

“ಹಿಂದೂ ರಾಷ್ಟ್ರೀಯತೆ ಒಂದು ಕೆಟ್ಟ ವಿಷಯ ಎಂದು ನನಗೆ ತಿಳಿದಿರಲಿಲ್ಲ. ಇಲ್ಲಿ ದಾಳಿಯಾಗಿದೆ ಅಥವಾ ತಪ್ಪಾಗಿ ಬಿಂಬಿಸಲಾಗಿದೆ ಎಂದು ಭಾವಿಸುವ ಪ್ರತಿಯೊಬ್ಬರಲ್ಲಿಯೂ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕೌನ್ಸಿಲ್ವುಮನ್ ಕರೆನ್ ಒರ್ಗೆನ್ ತಿಳಿಸಿದ್ದಾರೆ.

ವಿವೇಕ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ ಸೆಪ್ಟೆಂಬರ್ 20, 2022ರಂದು ಕೌನ್ಸಿಲ್ ಸಭೆಯ ಸಮಯದಲ್ಲಿ ಮಾತನಾಡಿದ್ದನು. ಮತದಾರರಿಗಾಗಿ ಮೀಸಲಿಟ್ಟ ವೇದಿಕೆಯನ್ನು ಬಳಸಿಕೊಂಡ ಆತ ಮುಸ್ಲಿಮರನ್ನು ಭಯೋತ್ಪಾದಕರು ಮತ್ತು ಅತ್ಯಾಚಾರಿಗಳು ಎಂದು ಜರಿದಿದ್ದನು. ಮುಸ್ಲಿಮರು 9/11ರ ಘಟನೆಯನ್ನು ‘ಆನಂದಿಸಿದ್ದಾರೆ’ ಮತ್ತು ದೇಶಗಳನ್ನು ‘ನಾಶ’ ಮಾಡಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತಕ್ಕೆ ವಲಸೆ ಬಂದಿದ್ದಾರೆ ಎಂದು ಆರೋಪಿಸಿದ್ದನು.

“ನೀವು ದೇಶದಲ್ಲಿ (ಭಾರತ) ನಡೆಯುವ ಅತ್ಯಾಚಾರದ ಬಗ್ಗೆ ಮಾತನಾಡುತ್ತೀರಿ. ಅವು ಮುಸ್ಲಿಮರಿಂದ ನಡೆಯುತ್ತಿವೆ. ಈ ಮುಸ್ಲಿಮರು ಎಲ್ಲ ಹುಡುಗಿಯನ್ನು ಸೆಳೆದುಕೊಳ್ಳುತ್ತಾರೆ. ಎಲ್ಲರನ್ನೂ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ. ನಂತರ ಅವರು ಮಕ್ಕಳನ್ನು ಮಾಡಿ, ಹುಡುಗಿಯರನ್ನು ಕೊಲ್ಲುತ್ತಾರೆ” ಎಂದು ಮಾತನಾಡಿದ್ದನು.

ಭಾರತದಲ್ಲಿ ಹಿಂಸಾತ್ಮಕ ಧೋರಣೆಯಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳೊಂದಿಗೆ ಸಂಬಂಧ ಹೊಂದಿರುವ ಯುಎಸ್ ಮೂಲದ ಹಿಂದೂ ಬಲಪಂಥೀಯ ಗುಂಪುಗಳ ಬಗ್ಗೆ ತನಿಖೆಗೆ ಒತ್ತಾಯಿಸುವ ನಿರ್ಣಯವನ್ನು ಟೀನೆಕ್ ಡೆಮಾಕ್ರಟಿಕ್ ಮುನ್ಸಿಪಲ್ ಕಮಿಟಿ (ಟಿಡಿಎಂಸಿ) ಅಂಗೀಕರಿಸಿದ ನಂತರ ಈ ಟೀಕೆಗಳನ್ನು ವಿವೇಕ್‌ ಮಾಡಿದ್ದನು.

ಇದನ್ನೂ ಓದಿರಿ: ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ವಿವೇಕ್ ಮಾಡಿದ ಮುಸ್ಲಿಂ ವಿರೋಧಿ ಟೀಕೆಗಳನ್ನು ಕೌನ್ಸಿಲ್ ಖಂಡಿಸಲು ವಿಫಲವಾದ ನಂತರ, ಹಲವಾರು ಮುಸ್ಲಿಂ ಟೀನೆಕ್ ನಿವಾಸಿಗಳು ಮತ್ತು ಸ್ನೇಹಿತರು ಆಕ್ರೋಶ ಹೊರಹಾಕಿದ್ದರು. ಅಕ್ಟೋಬರ್‌ನ ಸಿಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಿ, ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ವಿರುದ್ಧ ಕೌನ್ಸಿಲ್‌ನ ನಿಷ್ಕ್ರಿಯತೆಯನ್ನು ಖಂಡಿಸಿದ್ದರು.

ಕೌನ್ಸಿಲ್ಮನ್ ಕಪ್ಲಾನ್ ಮಾತನಾಡಿ, “ತಪ್ಪು ಮಾಹಿತಿಯನ್ನು ಹರಡುವ ಯಾರನ್ನಾದರೂ ನಿಲ್ಲಿಸುವುದಾಗಿದ್ದರೆ ಕಳೆದ ತಿಂಗಳು ನೀವು ಎಲ್ಲಿದ್ದೀರಿ? ಮುಸ್ಲಿಮರು 9/11 ಅನ್ನು ಆನಂದಿಸಿದ್ದಾರೆ. ಅವರು ಕ್ರಿಶ್ಚಿಯನ್ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಾರೆ. ಮಕ್ಕಳನ್ನು ಮಾಡಿ ಕೊಲ್ಲುತ್ತಾರೆ ಎಂದು ಹಿಂದೂ ಉಗ್ರಗಾಮಿ ಹೇಳುತ್ತಿದ್ದನು. ಇದು ಸ್ಪಷ್ಟ ತಪ್ಪು ಮಾಹಿತಿಯಲ್ಲವೇ?” ಎಂದು ಕೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...