Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....