Homeದಲಿತ್ ಫೈಲ್ಸ್ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು - ಪ್ರತಿಭಟನೆ

ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಕಚೇರಿ ಎದುರು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುಡಿಬಂಡೆ ತಾಲ್ಲೂಕಿನ ಬ್ರಾಹ್ಮಣರಹಳ್ಳಿಯ ಪರಿಶಿಷ್ಟ ಜಾತಿ ಸಮುದಾಯದ ವೆಂಕಟರಾಯಪ್ಪನವರ ಪುತ್ರಿ ವೆಂಕಟಲಕ್ಷ್ಮಿ ಮತ್ತು ಬಾಗೇಪಲ್ಲಿಯ ಮಹೇಶ್ ಎಂಬುವವರ ನಡುವೆ ನವೆಂಬರ್ 3ರಂದು ವಿವಾಹ ನಿಶ್ಚಯವಾಗಿತ್ತು. ಅದಕ್ಕೂ 15 ದಿನ ಮೊದಲೇ ವೆಂಕಟಲಕ್ಷ್ಮಿಯ ಸಹೋದರ ಆವುಲಕೊಂಡಪ್ಪ ಎಂಬುವವರು ಗುಡಿಬಂಡೆಯ ವೆಂಕಟರಮಣ ದೇವಾಲಯ ಸಮಿತಿಯ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರ ಬಳಿ ತೆರಳಿ ನನ್ನ ತಂಗಿಯ ವಿವಾಹಕ್ಕೆ ದೇವಾಲಯ ಕಲ್ಯಾಣ ಮಂಟಪ್ಪವನ್ನು ಬಾಡಿಗೆಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪರವರು ಅಂದು ಬೇರೆ ಮದುವೆ ನಿಗಧಿಯಾಗಿದೆ ಎಂದು ಸುಳ್ಳು ಹೇಳಿರುತ್ತಾರೆ. ವೆಂಕಟಲಕ್ಷ್ಮಿ ಮತ್ತು ಮಹೇಶ್ ಮದುವೆಯ ಲಗ್ನ ಪತ್ರಿಕೆಯಲ್ಲಿ ಅದೇ ಕಲ್ಯಾಣ ಮಂಟಪದ ಹೆಸರು ಸಹ ಮುದ್ರಿಸಿರುತ್ತಾರೆ. ಆದರೆ ಅಂದು ದೇವಾಲಯ ಬೀಗ ಹಾಕಿ ದಲಿತರ ಮದುವೆಗೆ ಅವಕಾಶ ನೀಡಿಲ್ಲ. ಅನಿವಾರ್ಯವಾಗಿ ದೇವಾಲಯದ ಹೊರಗೆ ಮದುವೆ ಮಾಡಲಾಗಿದೆ ಎಂದು ತಹಶೀಲ್ದಾರ್‌ರವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದು, ಎಲ್ಲಾ ಜಾತಿಯವರಿಗೂ ಬಳಕೆಯ ಹಕ್ಕಿದೆ ಎಂದು ಕಾನೂನು ಹೇಳುತ್ತದೆ. ಆದರೂ ನವೆಂಬರ್ 3 ರಂದು ಬೇರೆ ಯಾವುದೇ ಮದುವೆ ಇಲ್ಲದಿದ್ದರೂ ಸಹ ಉದ್ದೇಶಪೂರ್ವಕವಾಗಿ ದಲಿತರ ಮದುವೆಗೆ ಅವಕಾಶ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ವಧುವಿನ ಸಹೋದರ ಆವುಲಕೊಂಡಪ್ಪ ತಹಶೀಲ್ದಾರ್‌ರವರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ತಹಶೀಲ್ದಾರ್‌ ಸಿಗ್ಬತ್ ಉಲ್ಲಾರವರು, “ದೂರು ಪರಿಶೀಲಿಸಿದಾಗ ಮೇಲ್ನೋಟಕ್ಕೆ ತಪ್ಪು ನಡೆದಿರುವುದು ಕಂಡುಬಂದಿದೆ. ಹಾಗಾಗಿ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರಿಗೆ ಕಾರಣ ಕೇಳಿ ನೋಟಿಸ್ ಕಳಿಸಲಾಗಿದೆ. ಅವರಿಂದ ಮಾಹಿತಿ ಬಂದ ನಂತರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಗುಡಿಬಂಡೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೂ ಸಹ ದೂರು ಸಲ್ಲಿಸಿದ್ದಾರೆ. ಆನಂತರ ಆರೋಪಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಸ್ಪೃಶ್ಯತೆ ಆಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಜಿ.ವಿ ಗಂಗಪ್ಪ, ಗುಡಿಬಂಡೆ ತಾಲ್ಲೂಕು ಸಂಚಾಲಕ ರಮಣ, ಇಸ್ಕೂಲಪ್ಪ, ಆದಿನಾರಾಯಣ, ನರಸಿಂಹಮೂರ್ತಿ, ಅಮರಾವತಿ, ಗಂಗರಾಜು, C. ಮುನಿಯಪ್ಪ, M. ವೆಂಕಟ ರಾಯಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಕಲ್ಯಾಣ ಮಂಟಪದಲ್ಲಿ ಮದುವೆ ಆಗುವಂತಿಲ್ಲ ತಪ್ಪು. . ಪಕ್ಕದಲ್ಲಿ ಕುಳಿತರೆ ತಪ್ಪು. ಪ್ರೇಮ ವಿವಾಹ ತಪ್ಪು.ಸಂಭ್ರಮ ಆಚರಣೆ ಮಾಡಿದರೆ ತಪ್ಪು. ಶಾಲೆಯಲ್ಲಿ ಅಡಿಗೆ ಮಾಡಿದರೆ ತಪ್ಪು……..!

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...