Homeಅಂತರಾಷ್ಟ್ರೀಯತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

ತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

- Advertisement -
- Advertisement -

ಬಿಲೇನಿಯರ್‌‌ ಎಲಾನ್ ಮಸ್ಕ್‌‌ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌‌ ಅನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದಲ್ಲೆ ಕಂಪೆನಿಯ ಸುಮಾರು 7,500 ಸಿಬ್ಬಂದಿಯನ್ನು ಶುಕ್ರವಾರ ವಜಾಗೊಳಿಸಿದೆ. “ಕಂಪೆನಿಯ ಸುಮಾರು 50% ದಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ” ಎಂದು ಸುದ್ದಿ ಸಂಸ್ಥೆ ಎಎಫ್‌ಫಿ ಹೇಳಿದೆ.

ಪ್ರಪಂಚದಾದ್ಯಂತದ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅವರು ತಮ್ಮ ಹತಾಶೆಯನ್ನು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. “ಟ್ವಿಟ್ಟರ್‌ನಲ್ಲಿ ನನ್ನ ಕೆಲಸವು ಕೊನೆಗೊಂಡಿದೆ ಎಂಬ ಸುದ್ದಿಯಿಂದ ನನಗೆ ತಲುಪಿದೆ. ಈ ಬಗ್ಗೆ ನಾನು ಎದೆಗುಂದಿದ್ದು, ಇದನ್ನು ನಾನು ವಿರೋಧಿಸುತ್ತಿದ್ದೇನೆ” ಎಂದು ಟ್ವಿಟರ್‌‌ನ ಕೆನಡಾ ಮತ್ತು ಅಮರಿಕದ ಸಾರ್ವಜನಿಕ ನೀತಿ ನಿರ್ದೇಶಕ ಮಿಚೆಲ್ ಆಸ್ಟಿನ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರದೃಷ್ಟವಶಾತ್ ಕಂಪನಿಯು ದಿನಕ್ಕೆ 40 ಲಕ್ಷ ಡಾಲರ್‌‌ನಷ್ಟು ಕಳೆದುಕೊಳ್ಳುತ್ತಿರುವಾಗ ಬೇರೆ ಯಾವುದೇ ಆಯ್ಕೆಯಿಲ್ಲ” ಎಂದು ಎಲಾನ್ ಮಸ್ಕ್‌‌ ಶುಕ್ರವಾರ ಸಂಜೆ ಈ ವಿಷಯದ ಕುರಿತು ತಮ್ಮ ಮೊದಲ ಕಾಮೆಂಟ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ವಜಾಗೊಳಿಸುವ ಮುನ್ನ, ಟ್ವಿಟರ್ ವಿಶ್ವಾದ್ಯಂತ ತನ್ನ ಕಚೇರಿಗಳಿಗೆ ಪ್ರವೇಶವನ್ನು ಮುಚ್ಚಿತ್ತು ಮತ್ತು ಇಮೇಲ್ ಮೂಲಕ ತಮ್ಮ ಭವಿಷ್ಯದ ಸುದ್ದಿಗಾಗಿ ಕಾಯಲು ಉದ್ಯೋಗಿಗಳನ್ನು ಮನೆಯಲ್ಲಿಯೇ ಇರುವಂತೆ ಕೇಳಿತ್ತು.

ಇದನ್ನೂ ಓದಿ: ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

“ಜನರನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ತುಂಬಾ ಅಮಾನವೀಯವಾಗಿದೆ. ಇದು ಕೂಲಿ ಪ್ರಯತ್ನದಂತೆ ತೋರುತ್ತದೆ, ಕಂಪೆನಿಯು ಏನು ಮಾಡಿಯಾದರೂ ಹಣ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೆಸರು ಹೇಳಲಿಚ್ಛಿಸದ ವಜಾಗೊಂಡ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಶತಕೋಟಿ ಡಾಲರ್‌ಗಳನ್ನು ಸಾಲ ಪಡೆದುಕೊಂಡು ಮಾಡಿದ್ದ ಒಪ್ಪಂದದಂತೆ 44 ಶತಕೋಟಿ ಡಾಲರ್‌ಗಳ ಬೃಹತ್ ಮೊತ್ತದವನ್ನು ಪಾವತಿಸಲು ಬೇಕಾಗಿ ಎಲಾನ್ ಮಸ್ಕ್‌‌ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇದಕ್ಕಾಗಿ ಅವರು ತಮ್ಮ ಎಲೆಕ್ಟ್ರಿಕ್ ಕಾರ್ ಕಂಪನಿಯಾದ ಟೆಸ್ಲಾದ 15.5 ಶತಕೋಟಿ ಡಾಲರ್‌‌ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕಂಪೆನಿಯಲ್ಲಿ ಉಳಿದ ಉದ್ಯೋಗಿಗಳ ಮೇಲೆ ಬಿರುಸಿನ ವೇಗವನ್ನು ಎಲಾನ್ ಮಸ್ಕ್‌‌ ಅವರ ತಂಡ ಹೇರುತ್ತಿವೆ ಎಂದು ಕಂಪನಿಯ ಮೂಲಗಳು ಹೇಳಿವೆ. ಟ್ವಿಟ್ಟರ್ ಉದ್ಯೋಗಿಗಳ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಟೆಸ್ಲಾ ಡೆವಲಪರ್‌ಗಳನ್ನು ಕರೆತರುತ್ತಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಭಾರಿ ಹಣ ಪಾವತಿಸಿ ಟ್ವಿಟರ್‌ ಅನ್ನು ಕೊಂಡುಕೊಂಡಿದ್ದ ಎಲಾನ್ ಮಸ್ಕ್‌‌ ಹಣ ಸಂಪಾದಿಸಲು ಹೊಸ ಮಾರ್ಗಗಳನ್ನು ಹುಡುಕಲು ಇದನ್ನೆಲ್ಲಾ ಮಾಡುತ್ತಿದ್ದು, ಬ್ಲೂಟಿಕ್‌‌ ಬಳಕೆದಾರರಿಗೆ ತಿಂಗಳಿಗೆ 8 ಡಾಲರ್‌‌ ಶುಲ್ಕ ವಿಧಿಸುವ ಕಲ್ಪನೆ ಕೂಡಾ ಇದರಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...