Homeಮುಖಪುಟಗುಜರಾತ್ ಚುನಾವಣೆ: ಬಿಜೆಪಿ ತೊರೆದ ಹಿರಿಯ ಮುಖಂಡ ಜಯ್ ನಾರಾಯಣ್ ವ್ಯಾಸ್

ಗುಜರಾತ್ ಚುನಾವಣೆ: ಬಿಜೆಪಿ ತೊರೆದ ಹಿರಿಯ ಮುಖಂಡ ಜಯ್ ನಾರಾಯಣ್ ವ್ಯಾಸ್

- Advertisement -
- Advertisement -

ಗುಜರಾತ್ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಬಿಜೆಪಿ ಪಕ್ಷಕ್ಕೆ ಸಂಕಷ್ಟ ಎದುರಾಗಿದೆ. ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಜಯ್ ನಾರಾಯಣ್ ವ್ಯಾಸ್ ಪಕ್ಷ ತೊರೆದಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಆಪ್ ಪಕ್ಷದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇಂದು ಅಹಮದಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯಲ್ಲಿ ನನಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ದೂರಿದ್ದೇನೆ. ಆದರೆ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಇಷ್ಟು ಹಿರಿತನವಿದ್ದರೂ ಪ್ರತಿ ಬಾರಿಯೂ ದೂರುದಾರನ ಪಾತ್ರದಲ್ಲಿ ಉಳಿಯಲು ನನಗೆ ಬೇಸರವಾಗಿದೆ. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

30 ವರ್ಷಗಳಿಂದ ಬಿಜೆಪಿಯಲ್ಲಿದ್ದ 75 ವರ್ಷದ ಜಯ್ ನಾರಾಯಣ್‌ರವರು ಪಟಾನ್ ಜಿಲ್ಲೆಯ ಸಿಧ್‌ಪುರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆರೋಗ್ಯ ಸಚಿವರಾಗಿ ಮತ್ತು ನರ್ಮದಾ ನೀರಾವರಿ ಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದ ಅವರು 2017ರ ವಿಧಾನಸಭೆಯಲ್ಲಿ ಸೋಲು ಕಂಡಿದ್ದರು. ತದನಂತರ ಬಿಜೆಪಿಯ ಜಿಲ್ಲಾ ಘಟಕವು ತನ್ನನ್ನು ಮೂಲೆಗುಂಪು ಮಾಡುತ್ತಿದೆ ಎಂಬುದು ಅವರ ಆರೋಪವಾಗಿದೆ.

ನಾನು ಈ ಹಿಂದೆಯೇ ಪಕ್ಷ ತ್ಯಜಿಸಬೇಕಾಗಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷರಾದ ಸಿ.ಆರ್ ಪಾಟೀಲ್‌ರವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಅವರು ನನಗೆ ಹಲವಾರು ಬಾರಿ ಸಹಾಯ ಮಾಡಿರುವುದು ನಿಜ. ಆದರೆ ಇನ್ನು ಮುಂದೆಯೂ ಸಣ್ಣ ಪುಟ್ಟ ಸಮಸ್ಯೆಗಳಿಗೆಲ್ಲ ಅವರ ಬಳಿ ಹೋಗುವುದು ನನಗೆ ಇಷ್ಟವಿಲ್ಲ ಎಂದು ವ್ಯಾಸ್ ತಿಳಿಸಿದ್ದಾರೆ.

ವ್ಯಾಸ್‌ರವರು ಇದೇ ಅಕ್ಟೋಬರ್ 29 ರಂದು ರಾಜಸ್ಥಾನದ ಸಿಎಂ ಮತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅಶೋಕ್ ಗೆಹ್ಲೋಟ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗಾಗಿ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, “ನಾನು ಮುಂದಿನ ಚುನಾವಣೆಯಲ್ಲಿ ಸಿಧ್‌ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಮತ್ತು ಆಪ್ ಕಡೆಯಿಂದ ಆಹ್ವಾನ ಬಂದಿದೆ. ನನ್ನ ಕಾರ್ಯಕರ್ತರ ಜೊತೆ ಮಾತನಾಡಿ ನಿರ್ಧಾರ ಮಾಡುತ್ತೇನೆ” ಎಂದಿದ್ದಾರೆ.

ವ್ಯಾಸ್ ಅವರು ಜೂನ್ 2021ರಿಂದಲೇ ಬಿಜೆಪಿ ಬಗ್ಗೆ ಅತೃಪ್ತಗೊಂಡಿದ್ದರು. ಆಗ ಅವರು ಹೃದಯ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವಾಗ, ಬಿಜೆಪಿ ಪ್ರಧಾನ ಕಚೇರಿ ಕಮಲಂನಿಂದ ಸಭೆಗೆ ಹಾಜರಾಗಲು ಕರೆ ಬಂದಿತ್ತು. ಅನಾರೋಗ್ಯ ಪೀಡಿತರ ಆರೋಗ್ಯ ವಿಚಾರಿಸಿಕೊಳ್ಳುವ ಬದಲಾಗಿ ಸಭೆಗೆ ಬನ್ನಿ ಎಂದು ಕರೆದರೆ ಏನು ಮಾಡುವುದು? ಅವರಿಗೆ ಗೊತ್ತಿಲ್ಲವೆ? ಪಕ್ಷ ಖಂಡಿತ ಬದಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಬಹಿರಂಗವಾಗಿ ತಮ್ಮ ಆಕ್ರೋಶ ಹೊರಹಾಕಿದ್ದರು.

ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೆ ಹಂತ ಡಿಸೆಂಬರ್‌ 1 ರಂದು ಮತ್ತು ಎರಡನೇ ಹಂತ ಡಿಸೆಂಬರ್‌ 5 ರಂದು ನಡೆಯಲಿದೆ. ಡಿಸೆಂಬರ್‌ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ

ಇದನ್ನೂ ಓದಿ; ವಿಜಯಪುರ: ಮತ ನೀಡಿಲ್ಲವೆಂದು ಬಿಜೆಪಿ ನಾಯಕನ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...