Homeಮುಖಪುಟಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

- Advertisement -
- Advertisement -

ಶಾಲೆಗಳಲ್ಲಿ ಧ್ಯಾನ ಕಡ್ಡಾಯ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಈ ಯೋಜನೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಶ್ನೆಗಳ ಸುರಮಳೆ ಸುರಿಸಿದ್ದಾರೆ.

“ಸಿದ್ದರಾಮಯ್ಯನವರೇ, ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?” ಎಂದು ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮೊದಲು “ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು.

“ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ. ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು.

“ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು ನವೆಂಬರ್ 03ರಂದು ಬಿ.ಸಿ ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಗೇಷ್ ರವರೇ ಎರಡೂಕಡೆಯಿಂದ ಯೋಚಿಸೀ, ನಿಮ್ಮತರಹ ಮುಠ್ಠಾಳರು ವಿದ್ಯಾ ಮಂತ್ರಿಯೇ, ಈವಯಸ್ಸೀಲ್ಲೂ ಅರ್ಥವಾಗದಮೇಲೇ ಗುಂಡೀಗೋದಮೇಲೆ ಆಗುತ್ತದಯೇ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....