Homeಕರ್ನಾಟಕಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

ಪಾವಗಡ ಸೋಲಾರ್ ಪಾರ್ಕ್‌‌ ಯೋಜನೆಗೆ ಕೇಂದ್ರದಿಂದಲೇ ಮೆಚ್ಚುಗೆ ಸಿಕ್ಕಿದೆ, ತನಿಖೆಗೆ ಸಿದ್ಧ: ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳು ಶನಿವಾರ ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ” ಎಂದು ವಿವರಿಸಿದ್ದಾರೆ.

“ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ” ಎಂದು ಮಾಹಿತಿ ನೀಡಿದ್ದಾರೆ.

“ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್‌ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

ಇ.ಡಿ. ಸಮನ್ಸ್ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಇ.ಡಿ. ಅವರಿಗೆ ನಾನು ಎಲ್ಲಾ ಉತ್ತರ ನೀಡಿದ್ದೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖಾಧಿಕಾರಿ ಬದಲಾಗಿದ್ದಾರೆ ಎಂದು 7ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ನನಗೆ ಹಾಗೂ ನನ್ನ ಸಹೋದರನಿಗೆ ನೊಟೀಸ್ ನೀಡಿದ್ದಾರೆ. ಅವರು ಕೆಲವು ದಾಖಲೆ ಕೇಳಿದ್ದು ಅವುಗಳನ್ನು ಸಲ್ಲಿಸಿದ್ದೇನೆ. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನಿರ್ಲಕ್ಷ್ಯದಿಂದಾದ ಗರ್ಭಿಣಿ ಹಾಗೂ ಅವಳಿ ಮಕ್ಕಳ ಸಾವಿನ ಕುರಿತು ಮಾತನಾಡಿದ ಅವರು, “ಇದು ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಅದಕ್ಕೆ ಇದೇ ಸಾಕ್ಷಿ. ಸರ್ಕಾರಕ್ಕೆ ಜನರ ನೋವು, ಭಾವನೆ ಗೊತ್ತಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸುವುದು ತಿಳಿದಿಲ್ಲ” ಎಂದು ವಿವಾದಿಸಿದ್ದಾರೆ.

“ಸರ್ಕಾರ ಈಗ ಅಧಿಕಾರಿಗಳ ಅಮಾನತು ಮಾಡುವುದಾದರೆ, ಆಕ್ಸಿಜನ್ ದುರಂತ ಸಂದರ್ಭದಲ್ಲಿ 36 ಜನ ಸತ್ತಾಗ ಯಾಕೆ ಅಮಾನತು ಮಾಡಲಿಲ್ಲ. ಆಗ ಯಾವುದೇ ಅಧಿಕಾರಿ ವಿರುದ್ಧ ಕ್ರಮವೂ ಇಲ್ಲ, ಸಚಿವರ ರಾಜೀನಾಮೆ ಇಲ್ಲ. ನಾನು ಸಂತ್ರಸ್ತ ಕುಟುಂಬಗಳಿಗೆ ಹೋಗಿ ತಲಾ 1 ಲಕ್ಷ ಚೆಕ್ ನೀಡಿ ಸಾಂತ್ವನ ಹೇಳಿದೆ. ಕೋವಿಡ್‌ನಿಂದ ಸತ್ತವರಿಗೂ ಸರ್ಕಾರ ಈವರೆಗೂ ಪರಿಹಾರ ಹಣ ನೀಡಿಲ್ಲ. ರಾಜ್ಯದ ಎಲ್ಲಾ ಭಾಗಗಳಿಂದ ಈ ವಿಚಾರವಾಗಿ ಮಾಹಿತಿ ಸಂಗ್ರಹಿಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ. ಇದು ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಇಡೀ ಸರ್ಕಾರದ ವೈಫಲ್ಯ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...