Homeಮುಖಪುಟಜಾರ್ಖಂಡ್: ಐಟಿ ಅಧಿಕಾರಿಗಳು ದಾಳಿಗೆ ಬಳಸಿದ ಕಾರಿನಲ್ಲಿತ್ತು ಬಿಜೆಪಿ ಸ್ಟಿಕ್ಕರ್!

ಜಾರ್ಖಂಡ್: ಐಟಿ ಅಧಿಕಾರಿಗಳು ದಾಳಿಗೆ ಬಳಸಿದ ಕಾರಿನಲ್ಲಿತ್ತು ಬಿಜೆಪಿ ಸ್ಟಿಕ್ಕರ್!

ಐಟಿ ಅಧಿಕಾರಿಗಳು ಬಳಸಿದ ಬಿಜೆಪಿ ಸ್ಟಿಕ್ಕರ್ ಇದ್ದ ಕಾರು ಬಿಜೆಪಿ ಮುಖಂಡ ದಿನೇಶ್ ಮಹತೋ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಯತೀಶ್ ರೆಡ್ಡಿ ಆರೋಪಿಸಿದ್ದಾರೆ.

- Advertisement -
- Advertisement -

ಐಟಿ, ಈಡಿ, ಸಿಬಿಐ ಸೇರಿದಂತೆ ಮುಂತಾದ ಸ್ವತಂತ್ರ ತನಿಖಾ ಸಂಸ್ಥೆಗಳು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಅಣತಿಯಿಂತೆ ನಡೆದುಕೊಳ್ಳುತ್ತಿವೆ, ಅವು ನಿಷ್ಪಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಲೇ ಇವೆ. ಆ ಆರೋಪಗಳಿಗೆ ಇಂಬು ಕೊಡುವಂತೆ ಘಟನೆಯೊಂದು ಜಾರ್ಖಂಡ್‌ನಲ್ಲಿ ಜರುಗಿದೆ. ಕಾಂಗ್ರೆಸ್ ಶಾಸಕರ ಮೇಲೆ ಐಟಿ ದಾಳಿ ನಡೆಸಲು ಅಧಿಕಾರಿಗಳು ಬಳಸಿದ್ದ ಕಾರಿನ ಮೇಲೆ ಬಿಜೆಪಿ ಪಕ್ಷದ ಸ್ಟಿಕ್ಕರ್ ಇದ್ದುದ್ದು ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.

ಆಡಳಿತರೂಢ ಮೈತ್ರಿ ಪಕ್ಷಗಳಲ್ಲಿ ಒಂದಾದ ಜಾರ್ಖಂಡ್‌ ಕಾಂಗ್ರೆಸ್ ಪಕ್ಷದ ಪ್ರದೀಪ್ ಯಾದವ್ ಮತ್ತು ಕುಮಾರ್ ಜೈಮಂಗಲ್ ಎಂಬ ಶಾಸಕರ ನಿವಾಸದ ಮೇಲೆ ಶುಕ್ರವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ಜೈಮಂಗಲ್‌ರವರ ನಿವಾಸದ ಮೇಲೆ ದಾಳಿ ನಡೆಸಲು ಐಟಿ ಅಧಿಕಾರಿಗಳು ಬಳಸಿದ ಕಾರಿನ ಮೇಲೆ ಬಿಜೆಪಿ ಸ್ಟಿಕ್ಕರ್ ಪತ್ತೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಅಧಿಕಾರಿಗಳು ಆಗಮಿಸಿದ ಕಾರಿನ ಮೇಲೆ ಬಿಜೆಪಿ ವಿಧಾನಸಭೆ ಪಾಸ್ ಎಂದು ಬರೆದಿರು ಸ್ಟಿಕ್ಕರ್ ಇದ್ದು ಅದನ್ನು ಅಧಿಕಾರಿಯೊಬ್ಬ ಕಿತ್ತುಹಾಕುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಎಲ್ಲಡೆ ವೈರಲ್ ಆಗತೊಡಗಿದೆ.

ಜಾರ್ಖಂಡ್‌ನಲ್ಲಿ ಬಿಜೆಪಿ ಒಡೆತನದ ಕಾರುಗಳನ್ನು ಬಳಸಿಕೊಂಡು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಮತ್ತು ಅದರ ಮೇಲೆ ಬಿಜೆಪಿ ಸ್ಟಿಕ್ಕರ್ ಅಂಟಿಸಿದ್ದಾರೆ. JH01 L-5626 ನಂಬರ್‌ನ ಕಾರು ಬಿಜೆಪಿ ಮುಖಂಡ ದಿನೇಶ್ ಮಹತೋ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಟಿಆರ್‌ಎಸ್ ಪಕ್ಷದ ಮುಖಂಡ ಯತೀಶ್ ರೆಡ್ಡಿ ಆರೋಪಿಸಿದ್ದಾರೆ.

ಇತ್ತೀಚೆಗೆ ಬಿಜೆಪಿ ಪಕ್ಷವು ಜಾರ್ಖಂಡ್‌ನಲ್ಲಿ ಆಪರೇಷನ್ ಕಮಲ ನಡೆಸಲು ಯತ್ನಿಸಿತು. ಆದರೆ ನಾನು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಅದಕ್ಕೆ ಅವಕಾಶ ಕೊಡದೆ ತಡೆಯೊಡ್ಡಿದೆವು. ಹಾಗಾಗಿ ಬಿಜೆಪಿ ಪಕ್ಷವು ನಮ್ಮನ್ನು ಬೆದರಿಸಲು ಪ್ರಾಯೋಜಿತ ಐಟಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜೈಮಂಗಲ್ ಆರೋಪಿಸಿದ್ದಾರೆ.

ಪ್ರಜಾತಾಂತ್ರಿಕವಾಗಿ ಜನಾದೇಶದ ಮೂಲಕ ಆಯ್ಕೆಯಾದ ಸರ್ಕಾರಕ್ಕೆ ತೊಂದರೆ ಕೊಡುತ್ತಿರುವುದು ಏಕೆ ಎಂಬುದನ್ನು ಬಿಜೆಪಿ ಜನರಿಗೆ ಹೇಳಬೇಕಿದೆ ಎಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಗ್ರಹಿಸಿದ್ದಾರೆ.

ಆದರೆ ಈ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ದೀಪಕ್ ಪ್ರಕಾಶ್ ಮಾತನಾಡಿ, “ಕಾಂಗ್ರೆಸ್ ಕಾರ್ಯಕರ್ತರ ಪಿತೂರಿಯಿಂದಾಗಿ ಐಟಿ ಅಧಿಕಾರಿಗಳ ಕಾರಿನ ಮೇಲೆ ಬಿಜೆಪಿ ಸ್ಟಿಕ್ಕರ್ ಗಳು ಕಂಡುಬಂದಿವೆ. ಈ ರೀತಿಯ ಕಾರುಗಳು ಬಾಡಿಗೆಗೆ ದೊರೆಯುತ್ತವೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸಂಬಂಧ ಕಲ್ಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...