Homeಕರ್ನಾಟಕಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

- Advertisement -
- Advertisement -

ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಈಗ ಮೈಸೂರು ಆಳಿದ ‘ಟಿಪ್ಪು ಸುಲ್ತಾನ್‌’ ಕುರಿತು ನಾಟಕ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಸುಲ್ತಾನ್ ಕುರಿತು ಟೀಕಾಪ್ರಹಾರ ನಡೆಸಿದ್ದಾರೆ.

ಸುಳ್ಳುಗಳಿಂದಲೇ ಟೀಕೆಗೆ ಒಳಗಾಗಿರುವ ವ್ಯಕ್ತಿಯನ್ನು ಬಹುರೂಪಿ ನಾಟಕೋತ್ಸವಕ್ಕೆ ಕರೆಸಿ ವಿವಾದ ಸೃಷ್ಟಿಸಿದ್ದರಿಂದ ಹಿಡಿದು, ಕಿರಿಯ ಕಲಾವಿದರ ಮೇಲೆ ಟೀಕಾಪ್ರಹಾರವನ್ನು ನಡೆಸಿದವರೆಗೆ ರಂಗಾಯಣವನ್ನು ಕೋಮು ಕೇಂದ್ರಿತ ಮಾಡಿದರೆಂಬ ಟೀಕೆಗೆ ಗುರಿಯಾಗಿರುವ ಕಾರ್ಯಪ್ಪ ಈಗ ಮತ್ತೊಮ್ಮೆ ವಿವಾದದ ಕಡೆಗೆಯೇ ಗಮನ ಹರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಪ್ಪ ಅವರೇ ಬರೆದಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ವನರಂಗದಲ್ಲಿ ಡಾ.ಎಸ್‌.ಎಲ್‌.ಭೈರಪ್ಪ ಅವರು ನ.13ರಂದು ಬಿಡುಗಡೆ ಮಾಡಲಿದ್ದಾರೆ. ನ.20ರಿಂದ ಭೂಮಿಗೀತದಲ್ಲಿ ರಂಗಪ್ರಸ್ತುತಿ ನಡೆಯಲಿದೆ.

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಆರ್‌ಎಸ್‌ಎಸ್ ಮುಖಂಡ ವಾದಿರಾಜ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, ಭಿತ್ತಿಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ್ದಾರೆ. “ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಟಿಪ್ಪು ಕುರಿತು ಬಚ್ಚಿಡಲಾದ ಅನೇಕ ಸತ್ಯಗಳನ್ನು ಹೊರಚೆಲ್ಲಲು 15 ದೃಶ್ಯಗಳ ನಾಟಕವನ್ನು ರಚಿಸಿ, ಪ್ರಯೋಗಕ್ಕೆ ಸಿದ್ಧಪಡಿಸಲಾಗಿದೆ. ರಂಗ ವಿನ್ಯಾಸ ಶಶಿಧರ ಉಡುಪ, ವಸ್ತ್ರಪರಿಕರ ವಿನ್ಯಾಸಕಾರ ಪ್ರಮೋದ್ ಶಿಗ್ಗಾಂವ್ ಮಾಡಿದ್ದಾರೆ. ಸುಬ್ರಹ್ಮಣ್ಯ ಮತ್ತು ಧನಂಜಯ ಅವರು ಈ ನಾಟಕಕ್ಕೆ ಸಂಗೀತ ಸಂಯೋಜಿಸಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ ಮಾಡಿದ್ದಾರೆ. ಎಸ್.ರಾಮನಾಥ್ ಕೆಲವು ಹಾಡುಗಳನ್ನು ಬರೆದಿದ್ದಾರೆ. ಮೂರು ಗಂಟೆಗಳ ಕಾಲ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ” ಎಂದಿದ್ದಾರೆ.

ರಂಗಾಯಣ ರೆಪರ್ಟರಿಯ 15 ಕಲಾವಿದರೊಂದಿಗೆ 10 ಅತಿಥಿ ಕಲಾವಿದರು ಈ ನಾಟಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂವತ್ತು ಕಲಾವಿದರ ತಂಡ ಈ ನಾಟಕಕ್ಕೆ ಕೆಲಸ ಮಾಡಿದೆ. ನಾಟಕದ ಪ್ರಥಮ ಪ್ರದರ್ಶನ ನ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ. ನಂತರ ನ.21, 24, 26, 27, 30 ಹಾಗೂ ಡಿಸೆಂಬರ್‌ 4ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದ್ದಾರೆ.

“ಈ ನಾಟಕವು ಸತ್ಯ ಚರಿತ್ರೆಯ ಅನಾವರಣ. ಟಿಪ್ಪು ಕುರಿತು ಅತಿರಂಜಕ ಸುಳ್ಳು ಚರಿತ್ರೆಯೇ ನಿರ್ಮಾಣವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ನಡೆದಿರುವ ಮುಸ್ಲಿಂ ದೊರೆಗಳ ಆಕ್ರಮಣಕಾರಿ ಕೃತ್ಯಗಳನ್ನು ಅತ್ಯಂತ ಜಾಣತನದಿಂದ ಮುಚ್ಚಿಟ್ಟು ಬರೆದಿರುವ ಇತಿಹಾಸಕಾರರ ಚಿರಿತ್ರೆಯನ್ನೇ ಪಠ್ಯ ಪುಸ್ತಕವನ್ನಾಗಿಸಿ ಅದನ್ನೇ ಓದಿಸಿಕೊಂಡು ಬರಲಾಗಿದೆ. ಈ ಸುಳ್ಳಿನಲ್ಲಿ ಟಿಪ್ಪು ಸುಲ್ತಾನ್ ಸೇರುತ್ತಾನೆ” ಎಂದು ಕಾರ್ಯಪ್ಪ ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್‌ ಕುರಿತು ನಿಲ್ಲದ ಅಪಪ್ರಚಾರ

ಮೈಸೂರು ಆಳಿದ ಟಿಪ್ಪು ಸುಲ್ತಾನ್‌ರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಹಲವು ವರ್ಷಗಳಿಂದ ನಡೆಯುತ್ತಲೇ ಇವೆ. ಆದರೆ ಚಿಂತಕರು, ಇತಿಹಾಸಕಾರರು ಬೇರೆಯೇ ಸಂಗತಿಗಳನ್ನು ಹೇಳುತ್ತಾರೆ. ‘ನಾನುಗೌರಿ.ಕಾಂ’ ಈ ಕುರಿತು ಪದೇ ಪದೇ ವರದಿಗಳನ್ನು ಮಾಡಿದೆ.

ಬ್ರಾಹ್ಮಣರಿಗೆ ಟಿಪ್ಪು ಭೂದಾನ ಮಾಡಿದ್ದಿದೆ. ತುಳುನಾಡಿನ ದೇವಾಲಯಗಳಿಗೆ, ಕೇರಳದ ಮಲಬಾರ್ ಪ್ರದೇಶಕ್ಕೆ ಟಿಪ್ಪು ಸಾಕಷ್ಟು ಕೊಡುಗೆಗಳನ್ನು ಟಿಪ್ಪು ನೀಡಿದ್ದಾರೆ. ಟಿಪ್ಪು, ಅರ್ಹತೆ ಮತ್ತು ಸಾಮರ್ಥ್ಯದ ಆಧಾರದಲ್ಲಿ ಎಲ್ಲ ಧರ್ಮೀಯರಿಗೂ ತನ್ನ ಆಸ್ಥಾನದಲ್ಲಿ ಉನ್ನತ ಹುದ್ದೆಗಳನ್ನು ನೀಡಿದ್ದರು ಎಂಬುದು ಇತಿಹಾಸ ಪುಟಗಳಿಂದ ತಿಳಿದುಬರುತ್ತದೆ.

ಇವುಗಳನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಿವಾದಗಳ ಕುರಿತ ಸುದ್ದಿಗಳನ್ನು ಓದಲು ‘ಇಲ್ಲಿ ಕ್ಲಿಕ್’ ಮಾಡಿರಿ

“ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ” ಎನ್ನುತ್ತಾರೆ ‘ಟಿಪ್ಪು ಸುಲ್ತಾನ್‌’ ಕುರಿತು ಪುಸ್ತಕವನ್ನು ಬರೆದಿರುವ ‘ಇಸ್ಮತ್ ಫಜೀರ್‌’.

ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಂಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.

ಮಂಗಳೂರು ಭಾಗದ ಕ್ರೈಸ್ತರು ಬ್ರಿಟಿಷರೊಂದಿಗೆ ಕೈಜೋಡಿಸಿದ್ದನ್ನು ಟಿಪ್ಪು ಸಹಿಸಲಿಲ್ಲ. ಮುಸ್ಲಿಮರು ರಾಜ್ಯದ್ರೋಹ ಮಾಡಿದಾಗಲೂ ಟಿಪ್ಪು ವಿನಾಯಿತಿ ನೀಡಲಿಲ್ಲ. ಮಲಬಾರಿನ ನಾಯಕರುಗಳು, ಮಂಗಳೂರಿನ ಕ್ರೈಸ್ತರು, ಕೊಡವರು ಮುಂತಾದವರ ಜೊತೆ ಕ್ರೂರವಾಗಿ ವರ್ತಿಸಿದ್ದಕ್ಕೆ ರಾಜ್ಯದ್ರೋಹವೇ ಕಾರಣವಾಗಿತ್ತು. ಅದು ಅಂದಿನ ಆಡಳಿತದ ಪರಿಯಾಗಿತ್ತು ಎಂಬುದನ್ನು ಲೇಖಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಕೊಡಗಿನಲ್ಲಿ 70,000 ಹಿಂದೂಗಳನ್ನು ಟಿಪ್ಪು ಮತಾಂತರ ಮಾಡಿದ ಎನ್ನುತ್ತಾರೆ. ಆದರೆ ಟಿಪ್ಪು ನಿಧನದ 37 ವರ್ಷಗಳ ನಂತರದ ಜನಗಣತಿಯಲ್ಲಿ ಕೊಡಗಿನ ಜನಸಂಖ್ಯೆ 65,437 ಇರುವುದು ವಾಸ್ತವ. ಈ ಅಂಕಿಸಂಖ್ಯೆಗಳೇ ಈ ಮತಾಂತರದ ಸುಳ್ಳಿನ ಕಥೆಗೆ ಉತ್ತರ ಹೇಳುತ್ತವೆ. ಕ್ರೈಸ್ತರನ್ನು ಮತಾಂತರ ಮಾಡಲಾಯಿತು, 7,900 ದೇವಾಲಯಗಳನ್ನು ಧ್ವಂಸ ಮಾಡಲಾಯಿತು ಎಂಬುದೂ ಇಂತಹದ್ದೇ ಕಟ್ಟುಕತೆಗಳು. ಬಲವಂತದ ಮತಾಂತರ ಎಂಬುದು ಆಧಾರರಹಿತವಾಗಿದೆ ಎಂದು ಇತಿಹಾಸಕಾರರು ಪದೇಪದೇ ಹೇಳುತ್ತಿದ್ದಾರೆ.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು ಎಂದು ಚರಿತ್ರಾಕಾರರು ಉಲ್ಲೇಖಿಸುತ್ತಾರೆ.

(ಟಿಪ್ಪು ಕುರಿತ ವಿಶೇಷ ಬರಹಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಹೆಸರಿಗೆ ಮಸಿ ಬಳಿಯಲು ಮನುವಾದಿಗಳು ಎಷ್ಟೇ ಪ್ರಯತ್ನ ಮಾಡಿದರೂ, ಸಪಲರಾಗುವುದಿಲ್ಲ. ಏಕೆಂದರೆ ಟಿಪ್ಪುವಿನ ಸಾದನೆ ಅಜರಾಮರ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...