Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ.

- Advertisement -
- Advertisement -

ಇಂದು ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಕೊನೆಯ ಮೂರು ಪಂದ್ಯಗಳು ಭಾರೀ ರೋಚಕತೆ ಸೃಷ್ಟಿಸಿದ್ದವು. ಕೊನೆಗೂ ಪಾಕಿಸ್ತಾನ ಮತ್ತು ಭಾರತ ತಂಡಗಳು ತಮ್ಮ ಕೊನೆಯ ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ. ಭಾರತ ತಂಡ ತನ್ನ ಕೊನೆಯ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು 71 ರನ್‌ಗಳ ಭಾರೀ ಗೆಲುವಿನೊಂದಿಗೆ ಗ್ರೂಪ್ 2 ರಲ್ಲಿ ಅಗ್ರಸ್ಥಾನ ಪಡೆಯಿತು. ಹಾಗಾಗಿ ಅದು ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್‌ನೊಂದಿಗೆ ನವೆಂಬರ್ 10ರಂದು ಸೆಮಿಫೈನಲ್‌ ಎದುರಿಸಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್‌ರವರು ಆಕರ್ಷಕ ಅರ್ಧಶತಕದ ನೆರವಿನೊಂದಿಗೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿತು. ಆರಂಭಿಕ ಆಟಗಾರ ಕೆ.ಎಲ್ ರಾಹುಲ್ 35 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಮೂರು ಬೌಂಡರಿ ಸೇರಿ 51 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ 61 ರನ್ ಚಚ್ಚಿದರು. ಚೆಂಡನ್ನು ಅಂಗಳದ ಮೂಲೆ ಮೂಲೆಗೆ ಅಟ್ಟಿದ ಅವರು ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದರು.

ಗೆಲುವಿಗೆ 187 ರನ್‌ಗಳ ಗುರಿಪಡೆದು ಕಣಕ್ಕಿಳಿದ ಜಿಂಬಾಬ್ವೆ ಆಟಗಾರರು ಒಬ್ಬರ ನಂತರ ಒಬ್ಬರು ಔಟಾಗಿ ಯಾವುದೇ ಪ್ರತಿರೋಧ ತೋರದೆ ಭಾರತಕ್ಕೆ ಶರಣಾದರು. ಸಿಖಂದರ್ ರಾಜ 34 ಮತ್ತು ರ್ಯಾನ್ ಬುರಿ 35 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಉತ್ತಮ ಪ್ರದರ್ಶನ ತೋರಲು ವಿಫಲರಾದರು. ಇವರಿಬ್ಬರೂ ಆಟದ ನೆರವಿನಿಂದ ಜಿಂಬಾಬ್ವೆ ತಂಡ 17.2 ಓವರ್‌ಗಳಲ್ಲಿ 115 ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಭಾರತದ ಪರ ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಪಡೆದರೆ ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದು ಮಿಂಚಿದರು.

ಮತ್ತೊಂದು ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನ ಕೂಡ ಸೆಮಿಫೈನಲ್ ಪ್ರವೇಶಿಸಿದೆ. ಅದು ನವೆಂಬರ್ 09 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಸೆಮಿಫೈನಲ್ ಪಂದ್ಯವನ್ನಾಡಲಿದೆ. ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ. 2007ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಇವೆರೆಡು ತಂಡಗಳು ಫೈನಲ್‌ನಲ್ಲಿ ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್‌ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಈ ಭಾರಿಯ ಫೈನಲ್ ಪಂದ್ಯವು ನವೆಂಬರ್ 13 ರಂದು ಜರುಗಲಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...