Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...