Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...